Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ರತನ್ ಟಾಟಾ ನಿಧನಕ್ಕೆ ವಿವಿಧ ಸಂಘಟನೆಗಳ ಸಂತಾಪ

ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್‌ನ ಅಧ್ಯಕ್ಷರೂ ಆದ ರತನ್‌ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.

ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್‌ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.

ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್  ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.

Tags: