ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್ನ ಅಧ್ಯಕ್ಷರೂ ಆದ ರತನ್ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.
ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.
ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…