ಮೈಸೂರು ನಗರ

ರತನ್ ಟಾಟಾ ನಿಧನಕ್ಕೆ ವಿವಿಧ ಸಂಘಟನೆಗಳ ಸಂತಾಪ

ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್‌ನ ಅಧ್ಯಕ್ಷರೂ ಆದ ರತನ್‌ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.

ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್‌ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.

ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್  ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago