ಮೈಸೂರು: ಉದ್ಯಮಿ ಹಾಗೂ ಟಾಟಾ ಗ್ರೂಪ್ನ ಅಧ್ಯಕ್ಷರೂ ಆದ ರತನ್ ಟಾಟಾ ಅವರ ನಿಧನಕ್ಕೆ ನಗರದ ವಿವಿಧ ಸಂಘಟನೆಗಳು ಟಾಟಾ ಅವರ ಭಾವಚಿತ್ರ ಹಿಡಿದು ಮೌನಾಚರಣೆ ಮಾಡಿ ಸಂತಾಪ ಸಲ್ಲಿಸಿದರು.
ನಗರದ ಚಾಮುಂಡಿಪುರಂ ವೃತ್ತದಲ್ಲಿ ಗುರುವಾರ ಅಪೂರ್ವ ಸ್ನೇಹ ಬಳಗ, ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರದ ಸದಸ್ಯರು ಸಂತಾಪ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ನಗರಪಾಲಿಕೆ ಸದಸ್ಯ ಮಾವಿ ರಾಂಪ್ರಸಾದ್, ರತನ್ ಟಾಟಾ ಅವರು ಟಾಟಾ ಸನ್ಸ್ ಮೂಲಕ ಹಲವಾರು ಉದ್ದಿಮೆಗಳನ್ನು ಸ್ಥಾಪಿಸಿ ದೇಶದ ಲಕ್ಷಾಂತರ ಮಂದಿಗೆ ಉದ್ಯೋಗದಾತರಾಗಿ ಭಾರತವನ್ನ ಜಾಗತಿಕ ಮಟ್ಟದಲ್ಲಿ ಟಾಟಾ ಬ್ರಾಂಡ್ ಜನಪ್ರಿಯಗೊಳಿಸಿದರು. ಅವಕಾಶಗಳಿಗಾಗಿ ಕಾಯಬಾರದು ಅವಕಾಶವನ್ನ ಸೃಷ್ಟಿಸಿಕೊಳ್ಳಬೇಕು ಎನ್ನುವ ಮೂಲಕ ಯುವ ಉದ್ಯಮಿಗಳಿಗೆ ಸ್ಪೂರ್ಥಿಯಾಗಿದ್ದಾರೆ, ಸಮಾಜದಲ್ಲಿ ಸಂಪಾದನೆ ಶ್ರೀಮಂತಿಕೆಯ ಜೊತೆ ಹೃದಯ ಶ್ರೀಮಂತಿಕೆ ತೋರಿಸಿಕೊಟ್ಟವರು ರತನ್ ಟಾಟಾ ಎಂದು ಹೇಳಿದರು.
ಮಾಜಿನಗರ ಪಾಲಿಕಾ ಸದಸ್ಯ ಬಿ ವಿ ಮಂಜುನಾಥ್, ಬಿಜೆಪಿ ನಗರ ಉಪಾಧ್ಯಕ್ಷ ಜೋಗಿ ಮಂಜು, ಮೈಸೂರ್ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಲೋಹಿತ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್, ನಿರೂಪಕ ಅಜಯ್ ಶಾಸ್ತ್ರಿ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೋಳ ಜಗದೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ ಎಸ್ ಚಂದ್ರಶೇಖರ್, ಜೆಡಿಎಸ್ ಕಾರ್ಯಧ್ಯಕ್ಷ ಪ್ರಕಾಶ್ ಪ್ರಿಯದರ್ಶನ್, ದೂರ ರಾಜಣ್ಣ, ಕಾಂಗ್ರೆಸ್ ಯುವ ಮುಖಂಡ ಸಂತೋಷ್ ಕಿರಾಳು, ಮಧು ಎನ್ ಪೂಜಾರ್, ಧರ್ಮೇಂದ್ರ, ಮಹಾನ್ ಶ್ರೇಯಸ, ಹಾಗೂ ಇನ್ನಿತರರು ಹಾಜರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…