ಮೈಸೂರು ನಗರ

ವಿಚಾರಗೋಷ್ಠಿಯ ಪ್ರಚಾರ ವಾಹನಕ್ಕೆ ಚಾಲನೆ

ನಾಳೆ  “ಸಂವಿಧಾನವನ್ನು ಬದಲಾಯಿಸಿದ್ದು ಯಾರು” ಎಂಬ ವಿಚಾರ ಗೋಷ್ಠಿ

ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ ಭಾನುವಾರ  ನಗರದ ಜೆ ಕೆ ಮೈದಾನದಲ್ಲಿ ನಡೆಯಲಿರುವ ʻಸಂವಿಧಾನ ಬದಲಾಯಿಸಿದವರು ಯಾರು?ʼ ಎಂಬ ಪುಸ್ತಕದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಸಾರ್ವಜನಿಕರು, ವಿದ್ಯಾವಂತರು, ಸಮಾಜದ ಚಿಂತಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲೆಂದು ಆಮಂತ್ರಣ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.

ಗೋಷ್ಠಿಯಲ್ಲಿ ಬಿಹಾರದ ರಾಜ್ಯಪಾಲ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಮಾಜಿ ಉಪಮುಖ್ಯಮಂತ್ರಿಗೋವಿಂದ ಕಾರಜೋಳ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,  ಕೃಷ್ಣರಾಜ ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಪುಸ್ತಕ ಲೇಖಕ ವಿಕಾಸ್ ಪುತ್ತೂರು ಹಾಗೂ ಬಿಜೆಯ ನಾಯಕರು ಭಾಗವಹಿಸಲಿದ್ದಾರೆ.

ನಮ್ಮ ದೇಶದಲ್ಲಿ ಸಂವಿಧಾನ ಭಕ್ತಿಯಿಂದ ನೋಡುವಂತಹ ಶ್ರೇಷ್ಠವಾದ ಗ್ರಂಥ. ಆದರೆ ಇತ್ತೀಚಿಗೆ ಕಾಂಗ್ರೆಸ್  ಅದರ ಶ್ರೇಷ್ಠತೆಯನ್ನೇ ಹಾಳುಮಾಡುವ ರೀತಿಯಲ್ಲಿ ಸಂವಿಧಾನವನ್ನು ಚುನಾವಣಾ ಸರಕಾಗಿ ಉಪಯೋಗಿಸುತ್ತಿದೆ. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆವುಂಟು ಮಾಡಿದ ಕಾಂಗ್ರೆಸ್ ಈಗ ಅದನ್ನು ಮುಚ್ಚಿಹಾಕಲು ಮತ್ತೊಬ್ಬರಿಂದ ಸಂವಿಧಾನಕ್ಕೆ ಧಕ್ಕೆಯಾಗಲಿದೆ ಎನ್ನುವ ಸುಳ್ಳು ಆತಂಕವನ್ನು ಸಮಾಜದಲ್ಲಿ ನಿರ್ಮಾಣ ಮಾಡುತ್ತಿದೆ. ಇಂತಹ ಸುಳ್ಳುಗಳ ನಡುವೆ ನಿಜವಾಗಿಯೂ ಸಂವಿಧಾನವನ್ನು ಬದಲಾಯಿಸಿದವರು ಯಾರು ಎಂದು ತಿಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾರ್ಯಕರ್ತರು ಕರೆ ನೀಡಿದರು.

ಈ ಸಂಧರ್ಭದಲ್ಲಿ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿಮಂಜು, ಕೆ.ಆರ್. ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಪ್ರಧಾನ ಕಾರ್ಯದರ್ಶಿ ಅಕ್ಷಯ್, ಮುಖಂಡರುಗಳಾದ ಅಜಯ್ ಶಾಸ್ತ್ರಿ, ವರುಣ್, ಪ್ರಶೀಕ್, ರವಿಕುಮಾರ್, ಶ್ರೇಯಸ್ ಮಹಾನ್, ಸಾಯಿಕುಮಾರ್, ರಂಜನ್, ಮಿತುನ್ ಹಾಗು ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

2 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

2 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

2 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

2 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

2 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

2 hours ago