ಮೈಸೂರು ನಗರ

ವಿಚಾರಗೋಷ್ಠಿಯ ಪ್ರಚಾರ ವಾಹನಕ್ಕೆ ಚಾಲನೆ

ನಾಳೆ  “ಸಂವಿಧಾನವನ್ನು ಬದಲಾಯಿಸಿದ್ದು ಯಾರು” ಎಂಬ ವಿಚಾರ ಗೋಷ್ಠಿ

ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ ಭಾನುವಾರ  ನಗರದ ಜೆ ಕೆ ಮೈದಾನದಲ್ಲಿ ನಡೆಯಲಿರುವ ʻಸಂವಿಧಾನ ಬದಲಾಯಿಸಿದವರು ಯಾರು?ʼ ಎಂಬ ಪುಸ್ತಕದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಶನಿವಾರ ಚಾಲನೆ ನೀಡಲಾಯಿತು.

ಸಾರ್ವಜನಿಕರು, ವಿದ್ಯಾವಂತರು, ಸಮಾಜದ ಚಿಂತಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲೆಂದು ಆಮಂತ್ರಣ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.

ಗೋಷ್ಠಿಯಲ್ಲಿ ಬಿಹಾರದ ರಾಜ್ಯಪಾಲ  ಆರಿಫ್ ಮೊಹಮ್ಮದ್ ಖಾನ್ ಹಾಗೂ ಮಾಜಿ ಉಪಮುಖ್ಯಮಂತ್ರಿಗೋವಿಂದ ಕಾರಜೋಳ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್,  ಕೃಷ್ಣರಾಜ ಕ್ಷೇತ್ರದ ಶಾಸಕ ಟಿ. ಎಸ್. ಶ್ರೀವತ್ಸ, ಪುಸ್ತಕ ಲೇಖಕ ವಿಕಾಸ್ ಪುತ್ತೂರು ಹಾಗೂ ಬಿಜೆಯ ನಾಯಕರು ಭಾಗವಹಿಸಲಿದ್ದಾರೆ.

ನಮ್ಮ ದೇಶದಲ್ಲಿ ಸಂವಿಧಾನ ಭಕ್ತಿಯಿಂದ ನೋಡುವಂತಹ ಶ್ರೇಷ್ಠವಾದ ಗ್ರಂಥ. ಆದರೆ ಇತ್ತೀಚಿಗೆ ಕಾಂಗ್ರೆಸ್  ಅದರ ಶ್ರೇಷ್ಠತೆಯನ್ನೇ ಹಾಳುಮಾಡುವ ರೀತಿಯಲ್ಲಿ ಸಂವಿಧಾನವನ್ನು ಚುನಾವಣಾ ಸರಕಾಗಿ ಉಪಯೋಗಿಸುತ್ತಿದೆ. ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆವುಂಟು ಮಾಡಿದ ಕಾಂಗ್ರೆಸ್ ಈಗ ಅದನ್ನು ಮುಚ್ಚಿಹಾಕಲು ಮತ್ತೊಬ್ಬರಿಂದ ಸಂವಿಧಾನಕ್ಕೆ ಧಕ್ಕೆಯಾಗಲಿದೆ ಎನ್ನುವ ಸುಳ್ಳು ಆತಂಕವನ್ನು ಸಮಾಜದಲ್ಲಿ ನಿರ್ಮಾಣ ಮಾಡುತ್ತಿದೆ. ಇಂತಹ ಸುಳ್ಳುಗಳ ನಡುವೆ ನಿಜವಾಗಿಯೂ ಸಂವಿಧಾನವನ್ನು ಬದಲಾಯಿಸಿದವರು ಯಾರು ಎಂದು ತಿಳಿದುಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾರ್ಯಕರ್ತರು ಕರೆ ನೀಡಿದರು.

ಈ ಸಂಧರ್ಭದಲ್ಲಿ ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿಮಂಜು, ಕೆ.ಆರ್. ಯುವಮೋರ್ಚಾ ಅಧ್ಯಕ್ಷ ಕೆ.ಎಂ. ನಿಶಾಂತ್, ಪ್ರಧಾನ ಕಾರ್ಯದರ್ಶಿ ಅಕ್ಷಯ್, ಮುಖಂಡರುಗಳಾದ ಅಜಯ್ ಶಾಸ್ತ್ರಿ, ವರುಣ್, ಪ್ರಶೀಕ್, ರವಿಕುಮಾರ್, ಶ್ರೇಯಸ್ ಮಹಾನ್, ಸಾಯಿಕುಮಾರ್, ರಂಜನ್, ಮಿತುನ್ ಹಾಗು ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

15 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

15 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

15 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

15 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

15 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

15 hours ago