ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಲೋಕಾಯುಕ್ತಕ್ಕೆ ಕಾಂಗ್ರೆಸ್ ದೂರು ನೀಡಿದೆ.
ಇಂದು ಲೋಕಾಯುಕ್ತ ಕಚೇರಿಗೆ ಕಾಂಗ್ರೆಸ್ ಮುಖಂಡರೊಡನೆ ಭೇಟಿ ನೀಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು, ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದಾರೆ.
ಬಳಿಕ ಮಾತನಾಡಿದ ಲಕ್ಷ್ಮಣ್, ಲೋಕಾಯುಕ್ತ ಅಧಿಕಾರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಲೋಕಾಯುಕ್ತ ಅಧಿಕಾರಿಗಳಿಗೆ ಲಕ್ಷ್ಮಣ್ ಒತ್ತಡ ನೀಡುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡುತ್ತಿದ್ದಾನೆ. ಇದೆಲ್ಲಾ ಕೇವಲ ಊಹಾಪೋಹ. ಲೋಕಾಯುಕ್ತಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸ್ನೇಹಮಯಿ ಕೃಷ್ಣ ವಿರುದ್ಧ ಅನೇಕ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ನಾವು ಅವನ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ ಎಂದರು.
ಇನ್ನು ಮುಡಾ ಅಕ್ರಮದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಸಾಕ್ಷಿ ನಾಶ ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾವು ಸಾಕ್ಷಿ ನಾಶ ಮಾಡಿದ್ದೇವೆ ಎನ್ನುವುದೆಲ್ಲಾ ಬರೀ ಸುಳ್ಳು ಎಂದು ಸ್ಪಷ್ಟಪಡಿಸಿದರು. ಇನ್ನು ಮುಡಾಗೆ ಸಿಎಂ ಸಿದ್ದರಾಮಯ್ಯ ಒಳ್ಳೆಯ ಅಧಿಕಾರಿಯನ್ನೇ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಿದ್ದಾರೆ. ಈ ಮೂಲಕ ಮುಡಾ ಶುದ್ಧೀಕರಣ ಮಾಡುವ ಕೆಲಸ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…