H D Kumaraswamy
ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನ ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಆಗ ನಾನು ಐದೇ ನಿಮಿಷದಲ್ಲಿ ಪ್ರಧಾನಿ ಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನ ಧಿಕ್ಕರಿಸುವ ಶಕ್ತಿಯೂ ಇಲ್ಲ.
ತಮಿಳುನಾಡು ಸರ್ಕಾರ ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಿದರೆ ಅದು ಆಗುತ್ತದೆ. ಇಲ್ಲದಿದ್ದರೆ ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ. ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ನವರು, ನಾನಲ್ಲ. ಯೋಜನೆ ಮಾಡ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಎಂದು ಪ್ರಶ್ನೆ ಮಾಡಿದರು.
ಮೇಕೆದಾಟು ಯೋಜನೆ ಸಂಬಂಧ ಕಳೆದ ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…