ಮೈಸೂರು ನಗರ

ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನ ಮೇಕೆದಾಟು ಯೋಜನೆಗೆ ಒಪ್ಪಿಸಲಿ. ಆಗ ನಾನು ಐದೇ ನಿಮಿಷದಲ್ಲಿ ಪ್ರಧಾನಿ ಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ. ಕಾಂಗ್ರೆಸ್‌ನವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನ ಧಿಕ್ಕರಿಸುವ ಶಕ್ತಿಯೂ ಇಲ್ಲ.

ತಮಿಳುನಾಡು ಸರ್ಕಾರ ಧಿಕ್ಕರಿಸಿ ಮೇಕೆದಾಟು ಯೋಜನೆ ಮಾಡಿದರೆ ಅದು ಆಗುತ್ತದೆ. ಇಲ್ಲದಿದ್ದರೆ ಮೇಕೆದಾಟು ಯೋಜನೆ ಕಾಂಗ್ರೆಸ್ ಕೈಯಲ್ಲಿ ಸಾಧ್ಯವಿಲ್ಲ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ. ಮೇಕೆದಾಟು ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್‌ನವರು, ನಾನಲ್ಲ. ಯೋಜನೆ ಮಾಡ್ತೇವೆ ಎಂದು ಹೇಳಿದವರು ಮಾಡಬೇಕು ತಾನೇ? ಎಂದು ಪ್ರಶ್ನೆ ಮಾಡಿದರು.

ಮೇಕೆದಾಟು ಯೋಜನೆ ಸಂಬಂಧ ಕಳೆದ ಎರಡೂವರೆ ವರ್ಷದಿಂದ ಸುಮ್ಮನೆ ಸಮಯ ಹಾಳು ಮಾಡುತ್ತಿದ್ದಾರೆ ಅಷ್ಟೇ. ಸುಮ್ಮನೆ ನನ್ನ ಮೇಲೆ ಜವಾಬ್ದಾರಿ ಹೊರಿಸಿದರೆ ನಾನು ಹೇಗೆ ಮಾಡಲು ಸಾಧ್ಯ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

2 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

2 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

2 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

4 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

4 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

12 hours ago