ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ಪೊಲೀಸ್ ಠಾಣೆಗೆ ದೂರು ನೀಡಿದೆ.
ಆಗಸ್ಟ್.10ರಂದು ಮೈಸೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಭಾಷಣ ಮಾಡಿದ್ದರು.
ಭಾಷಣದುದ್ದಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಡಿಕೆಶಿ ಅವರು ಬೆಂಗಳೂರಿನ ಜೇಡರಹಳ್ಳಿ ರಸ್ತೆಗಳಲ್ಲಿ ಇರುವ ಮ್ಯಾನ್ ಹೋಲ್ ಮುಚ್ಚಳಗಳನ್ನು ಕಳ್ಳತನ ಮಾಡಿ ಗುಜರಿಗೆ ಮಾರಾಟ ಮಾಡುತ್ತಾ ಇದ್ದರು ಎಂದು ಆರೋಪಿಸಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು.
ಹಾಗಾಗಿ ಎಚ್ಡಿಕೆ ಹೇಳಿಕೆಯಿಂದ ಡಿಕೆಶಿ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ಹೇಳಿಕೆಗಳನ್ನು ನೀಡಿ ಡಿ.ಕೆ.ಶಿವಕುಮಾರ್ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಿ ಎಂದು ಮನವಿ ಮಾಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…