prathap simha
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…