prathap simha
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…
ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು…
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…