prathap simha
ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಇನ್ನು ಆರ್ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.
ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…
ಇಸ್ಲಾಮಾಬಾದ್: ಉಗ್ರ ಮಸೂದ್ ಅಜರ್ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…
ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…
ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…
ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…
ಮಂಡ್ಯ: ಬೈಕ್ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…