ಮೈಸೂರು ನಗರ

ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್‌ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್‌ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇನ್ನು ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್‌ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 hour ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

2 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

3 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

12 hours ago