ಮೈಸೂರು ನಗರ

ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ: ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್‌ರಿಂದ ನಮಗೆ ಧರ್ಮದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ. ಸಿದ್ದರಾಮಯ್ಯ ತಂತ್ರ ಕಾಂಗ್ರೆಸ್ ಮೂರ್ಖರಿಗೆ ಅರ್ಥವಾಗುತ್ತಿಲ್ಲ. ಮುಸ್ಲಿಂಮರನ್ನು ತಮ್ಮ ಬೆನ್ನ ಹಿಂದೆ ಇಟ್ಟುಕೊಳ್ಳಲು ಸಿದ್ದರಾಮಯ್ಯ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆದಿದ್ದಾರೆ. ನಾಳೆ ಸಿಎಂ ಕುರ್ಚಿಗೆ ಕಂಟಕ ಬಂದಾಗ ಮುಸ್ಲಿಂ ಶಕ್ತಿ ತಮ್ಮ ಹಿಂದೆ ನಿಲ್ಲಿಸಿಕೊಳ್ಳಲು ಸಿದ್ದರಾಮಯ್ಯ ಎಣೆದಿರುವ ತಂತ್ರ ಇದು. ಕಾಂಗ್ರೆಸ್ ಅನ್ನು ಬ್ಲ್ಯಾಕ್ ಮೇಲ್ ಮಾಡಲು ಸಿದ್ದರಾಮಯ್ಯ ಮಾಡಿರುವ ಪ್ಲಾನ್ ಕಾಂಗ್ರೆಸ್‌ನವರಿಗೆ ಅರ್ಥವಾಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಇನ್ನು ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃ ಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆಶಿಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್‌ಗೆ ಮಾತೃಭೂಮಿಗೆ ಎಷ್ಟು ಗೌರವವಿದೆ ನೋಡಿ ಎಂದು ಪ್ರಶ್ನೆ ಮಾಡಿದರು.

ಆಂದೋಲನ ಡೆಸ್ಕ್

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

8 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

11 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

11 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

12 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

13 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

14 hours ago