ಮೈಸೂರು ನಗರ

ಕಾಂಗ್ರೆಸ್‌ ಡೋಂಗಿ ರಾಜಕಾರಣ ಅನುಸರಿಸುತ್ತಿದೆ: ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ಆಕ್ರೋಶ

ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಮತ್ತು ಒಳ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಕೀಲ ಅರುಣ್ ಕುಮಾರ್ ಅವರು, ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷ ಆಯ್ತು. ಇತರೆ ರಾಜ್ಯಗಳು ಬೇಗ ಡಾಟಾ ಕಲೆಕ್ಟ್ ಮಾಡಿವೆ. ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಸಮುದಾಯದ ಮತ ಬ್ಯಾಂಕ್ ಪಡೆಯಲು ಪಿತೂರಿ ಮಾಡುತ್ತಿದೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಧಿಕಾರಕ್ಕೆ ಬಂದಿದೆ. ಆದರೂ ಕಾಂಗ್ರೆಸ್ ಡೋಂಗಿ ರಾಜಕಾರಣ ಅನುಸರಿಸುತ್ತಿದೆ. ಒಳ ಮೀಸಲಾತಿ ಕೊಡುವ ವೇಳೆ ಸಮೀಕ್ಷೆ ಅವಶ್ಯಕತೆ ಇಲ್ಲ. ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕೊಡುವ ನಿರ್ಧಾರ ಮಾಡಿಲ್ಲ. ಒಳ ಮೀಸಲಾತಿ ಕೊಡುವ ಮುನ್ನ ಸರ್ಕಾರಿ ಹುದ್ದೆ ಭರ್ತಿ ಮಾಡುವ ಹುನ್ನಾರ ಕಾಂಗ್ರೆಸ್‌ನದ್ದು. ಹೆಚ್.ಸಿ.ಮಹದೇವಪ್ಪ ತಮ್ಮ ಚೇಲಾಗಳ ಮೂಲಕ ನಮ್ಮ ಮೇಲೆ ಪ್ರಕರಣ ದಾಖಲು ಮಾಡಿಸುತ್ತಿದ್ದಾರೆ. ಆದ್ದರಿಂದ ಸಚಿವ ಮಹದೇವಪ್ಪಗೆ ನೇರ ಸವಾಲು ಹಾಕುತ್ತೇವೆ. ಮಹದೇವಪ್ಪ ಏನು ದೊಡ್ಡ ವ್ಯಕ್ತಿ ಅಲ್ಲ. ನಮ್ಮ ಮೇಲೆ ಇನ್ನು ನೂರು ಕೇಸ್ ಹಾಕಲಿ. ಇಂತಹ ಎಷ್ಟೇ ಕೇಸ್‌ಗಳನ್ನ ಹಾಕಿದ್ರು ನಾವು ಹೆದರಲ್ಲ. ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದಾಗ ಮಹದೇವಪ್ಪ ತೀರ್ಥ ತೆಗೆದುಕೊಳ್ಳದೇ ಬಂದ್ರಿ. ನಮ್ಮ ಧಾರ್ಮಿಕ ಭಾವನೆಗಳಿಗೂ ಧಕ್ಕೆ ಆಗಿದೆ. ನಮ್ಮ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ನಿಮ್ಮ ಮೇಲೂ ಕೇಸ್ ಹಾಕುತ್ತೇವೆ ಎಂದು ವಕೀಲ ಅರುಣ್ ಕುಮಾರ್ ಎಚ್ಚರಿಕೆ ನೀಡಿದರು.

ಇದೇ ವೇಳೆ ಮಾತನಾಡಿದ ಒಳ ಮೀಸಲಾತಿ ಹೋರಾಟ ಸಮಿತಿ ಸದಸ್ಯ ಭಾಸ್ಕರ್ ಪ್ರಸಾದ್ ಅವರು, ಒಳ ಮೀಸಲಾತಿ ಹಾಕಿಗಾಗಿ ನಮ್ಮ ಹೋರಾಟ ನಡೆಯುತ್ತಿದೆ. ನಮ್ಮ ಹೋರಾಟಕ್ಕೆ ಹೆದರಿರುವ ಸರ್ಕಾರ ಈಗ ನಮ್ಮ ಸಮುದಾಯದವರನ್ನೇ ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ಎಂಎಲ್‌ಸಿ ತಿಮ್ಮಯ್ಯ ಒಬ್ಬ ಪೇಮೆಂಟ್ ಗಿರಾಕಿ. ಇಂತಹವರು ನಮ್ಮ ಸಮುದಾಯದ ಕುಲಕಂಟಕರು. ಪೊಲೀಸ್‌ನವರು ಕಾನೂನಿನ ಪ್ರಕಾರ ಕೆಲಸ ಮಾಡಬೇಕು. ಮಹದೇವಪ್ಪ, ತಿಮ್ಮಯ್ಯ ದೂರು ಕೊಟ್ರೆ ಕೇಸ್ ಹಾಕ್ತಿರಿ. ನಾವು ದೂರು ಕೊಟ್ರೆ ಪ್ರಕರಣ ದಾಖಲು ಮಾಡಲ್ಲ.
ಹೆಚ್.ಸಿ.ಮಹದೇವಪ್ಪ, ತಿಮ್ಮಯ್ಯ ನೀವು ಕಾಂಗ್ರೆಸ್‌ನ ಮಕ್ಕಳಾದ್ರೆ ನಮ್ಮ ಹೋರಾಟ ತಡೆಯುವ ಕೆಲಸ ಮಾಡಿ. ಮುಂದಿನ ಚುನಾವಣೆಗಳಲ್ಲಿ ನಿಮಗೆ ತಕ್ಕ ಪಾಠ ಕಲಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

10 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

12 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

15 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

19 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

23 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

23 hours ago