ಮೈಸೂರು: ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್ ಕೊಡಲು ಆಡಳಿತರೂಢ ಕಾಂಗ್ರೆಸ್ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ದಪಡಿಸಿದೆ.
ಈ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಕಾಂಗ್ರೆಸ್ ಮೈತ್ರಿ ಪಕ್ಷಗಳ ಬ್ರಷ್ಟಚಾರದ ದಾಖಲೆಗಳನ್ನು ಜನರ ಮುಂದಿಡಲಿದೆ. ಸಮಾವೇಶದಲ್ಲಿ ಸಾವಿರಾರ ಜನರು ಸೇರುವ ನಿರೀಕ್ಷೆ ಇದೆ. ಹೀಗಾಗಿ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಮೈಸೂರಿನಾದ್ಯಾಂತ ಪೊಲೀಸರ ನಿಯೋಜನೆಯನ್ನು ಹೆಚ್ಚಿಸಲಾಗಿದೆ.
ನಗರದಲ್ಲಿ ನಾಲ್ಕು ಡಿಐಜಿಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೆ, 36 ಡಿವೈಎಸ್ಪಿ, 77 ಇನ್ಸ್ಪೆಕ್ಟರ್, 175 ಪಿಎಸ್ಐ ಸೇರಿದಂತೆ ಜಿಲ್ಲೆಯ 3 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜೊತೆಗೆ ಹೊರ ಜಿಲ್ಲೆಯ 1500 ಪೊಲೀಸರು, 60 ಕೆಎಸ್ಆರ್ಪಿ ತುಕಡಿ, 20 ಸಿಎಆರ್ ತುಕಡಿ, 500 ಹೋಮ್ ಗಾರ್ಡ್ಸ್ ನಿಯೋಜನೆಯ ಅಲ್ಲದೇ, ಸಮಾವೇಶದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.
ಈ ಬೃಹತ್ ಜನಾಂದೋಲನ ಸಮಾವೇಶದ ಅಂಗವಾಗಿ ನಗರದಾದ್ಯಂತ ಕಾಂಗ್ರೆಸ್ ನಾಯಕರ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರ, ಶಾಸಕರು ಕಟೌಟ್ ಹಾಗೂ ಫ್ಲೆಕ್ಸ್ಗಳಉ ಎಲ್ಲೆಡೆ ರಾರಾಜಿಸುತ್ತಿವೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…