Congress party believes in social justice
ಮೈಸೂರು: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. ಮೈಸೂರು ಜಿಲ್ಲೆ ಹಾಗೂ ಚಾಮರಾಜನಗರವನ್ನು ಅಭಿವೃದ್ಧಿಯ ಪಥದಲ್ಲಿ ತರುತ್ತಿರುವ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದರು.
ಇದು ಯಾರ ಸವಾಲಿಗೂ ಕರೆದ ಸಭೆಯಲ್ಲ. 2023ರಲ್ಲಿ ಕಾಂಗ್ರೆಸ್ಗೆ ಜನರೇ ಶಕ್ತಿ ತುಂಬಿದ್ದಾರೆ. ಗ್ಯಾರಂಟಿ ಯೋಜನೆಗಳ ಪ್ರಮುಖ ಯೋಜನೆಗಳಲ್ಲಿ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಮೈಸೂರಿನಲ್ಲಿ ಹಲವು ರಸ್ತೆಗಳು ನಿರ್ಮಾಣ ಆಗಿದ್ದು, ನಮ್ಮ ಸರ್ಕಾರ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಚುನಾವಣಾ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ ಎಂದು ಹೇಳಿದರು.
ಯಾರು ಕೆಲಸ ಮಾಡಿಲ್ಲವೋ ಅವರು ಮೈ ಪರಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ವಿಪಕ್ಷಗಳ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…