kj george
ಮೈಸೂರು: ಸ್ಮಾರ್ಟ್ ಮೀಟರ್ ವಿಚಾರದಲ್ಲೂ ಬಿಜೆಪಿಯವರು ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಇಂಧನ ಸಚಿವ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ.
ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಮಾಡಿರುವ ಆರೋಪಕ್ಕೆ ಸಾಕ್ಷಿಗಳಿದ್ದರೆ ತೋರಿಸಲಿ. ಡಿ.ಕೆ.ರವಿ ಸಾವು, ಗಣಪತಿ ಆತ್ಮಹತ್ಯೆ ಪ್ರಕರಣದಲ್ಲೂ ನನ್ನ ಮೇಲೆ ಆರೋಪ ಮಾಡಿದ್ದರು. ಆಗ ಸಿಬಿಐನವರು ನನ್ನನ್ನು ಕರೆಸಲೇ ಇಲ್ಲ. ಇದೇ ರೀತಿ ಬಿಜೆಪಿಯವರು ಸ್ಮಾರ್ಟ್ ಮೀಟರ್ ವಿಚಾರದಲ್ಲೂ ನಿರಾಧಾರ ಆರೋಪ ಮಾಡುತ್ತಿದ್ದಾರೆ. ಬೇಕಿದ್ದರೆ ಕೋರ್ಟ್ಗೆ ಹೋಗಲಿ. ನಾನೇನು ಟಾರ್ಗೆಟ್ ಆಗ್ತಾ ಇಲ್ಲ. ಕಾಂಗ್ರೆಸ್ ಪಕ್ಷವೇ ಬಿಜೆಪಿಯವರ ಟಾರ್ಗೆಟ್. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಇದನ್ನು ಸಹಿಸಲು ಆಗದೇ ಈ ರೀತಿ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…