ಮೈಸೂರು ನಗರ

ಚುನಾವಣಾ ಅಕ್ರಮದ ರೂವಾರಿ ಕಾಂಗ್ರೆಸ್ ಪಾರ್ಟಿ: ಎಂ.ಜಿ.ಮಹೇಶ್

ಮೈಸೂರು: ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಇತ್ತೀಚಿನ ವರ್ತನೆ ನೋಡಿದರೆ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ ಎಂದು ಕಾಣಿಸುತ್ತಿದೆ. ಆಪರೇಷನ್ ಸಿಂಧೂರ ಪ್ರಕರಣದಿಂದ ಹಿಡಿದು ಇತ್ತೀಚಿನ ಡೊನಾಲ್ಡ್ ಟ್ರಂಪ್‌ ಹೇಳಿಕೆಯವರೆಗೂ ಕಾಂಗ್ರೆಸ್ ದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದೆ. ಮಾಲೆಂಗಾವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ತೀರ್ಪು ನೀಡಿದ ಬಳಿಕವೂ ಕಾಂಗ್ರೆಸ್ ನಾಯಕರು ವಿದ್ರೋಹದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಲೋಕಸಭಾ ಚುನಾವಣೆ ವೇಳೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್.5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಕಾಂಗ್ರೆಸ್ ಗೆದ್ದಾಗ ಇವಿಎಂ ಚೆನ್ನಾಗಿವೆ ಎನ್ನುತ್ತಾರೆ. ಕಾಂಗ್ರೆಸ್ ಸೋತಾಗ ಇವಿಎಂ ಮೇಲೆ ಆರೋಪ ಮಾಡುತ್ತಾರೆ. ಸ್ವಾತಂತ್ರ್ಯ ನಂತರ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಯಾವ ರೀತಿ ಗೆಲ್ಲುತ್ತಿತ್ತು ಎಂಬುದು ಗೊತ್ತಿದೆ. ಇವಿಎಂ ಬಂದನಂತರ ಚುನಾವಣಾ ಅಕ್ರಮಕ್ಕೆ ತೆರೆ ಬಿದ್ದಿದೆ. ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಹಾಗು ಆನಂತರ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ‌ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿಯಾಗಿ ಇದ್ದವಾ? ಎಂದು ಪ್ರಶ್ನಿಸಿದ ಅವರು, ನೈತಿಕತೆಯೇ ಇಲ್ಲದ ಗಲೀಜು ವ್ಯಕ್ತಿಯಂತೆ ರಾಹುಲ್ ಗಾಂಧಿ ವರ್ತಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುಂದಿಟ್ಟುಕೊಂಡು ಇಡೀ ದೇಶದಾದ್ಯಂತ ವಿದ್ರೋಹದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ.
ವೇಮುಲ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚುನಾವಣೆಯಲ್ಲಿ ಮೊದಲು ಅಕ್ರಮ ನಡೆಸಿದ್ದು ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿ. ಚುನಾವಣಾ ಅಕ್ರಮದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಗೆ ಚೀಮಾರಿ ಹಾಕಿತ್ತು. ಆಗ ಇಂದಿರಾಗಾಂಧಿ ತಪ್ಪಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದ್ದರು. ಚುನಾವಣಾ ಅಕ್ರಮದ ರೂವಾರಿ ಕಾಂಗ್ರೆಸ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago