ಮೈಸೂರು ನಗರ

ಚುನಾವಣಾ ಅಕ್ರಮದ ರೂವಾರಿ ಕಾಂಗ್ರೆಸ್ ಪಾರ್ಟಿ: ಎಂ.ಜಿ.ಮಹೇಶ್

ಮೈಸೂರು: ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಹೇಳಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‌ನ ಇತ್ತೀಚಿನ ವರ್ತನೆ ನೋಡಿದರೆ ರಾಷ್ಟ್ರದ್ರೋಹದ ಕೆಲಸ ಮಾಡುತ್ತಿದೆ ಎಂದು ಕಾಣಿಸುತ್ತಿದೆ. ಆಪರೇಷನ್ ಸಿಂಧೂರ ಪ್ರಕರಣದಿಂದ ಹಿಡಿದು ಇತ್ತೀಚಿನ ಡೊನಾಲ್ಡ್ ಟ್ರಂಪ್‌ ಹೇಳಿಕೆಯವರೆಗೂ ಕಾಂಗ್ರೆಸ್ ದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದೆ. ಮಾಲೆಂಗಾವ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯ ನಿರ್ದೋಷಿಗಳೆಂದು ತೀರ್ಪು ನೀಡಿದ ಬಳಿಕವೂ ಕಾಂಗ್ರೆಸ್ ನಾಯಕರು ವಿದ್ರೋಹದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಿಡಿಕಾರಿದರು.

ಇನ್ನು ಲೋಕಸಭಾ ಚುನಾವಣೆ ವೇಳೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಆಗಸ್ಟ್.5ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ. ಕಾಂಗ್ರೆಸ್ ಗೆದ್ದಾಗ ಇವಿಎಂ ಚೆನ್ನಾಗಿವೆ ಎನ್ನುತ್ತಾರೆ. ಕಾಂಗ್ರೆಸ್ ಸೋತಾಗ ಇವಿಎಂ ಮೇಲೆ ಆರೋಪ ಮಾಡುತ್ತಾರೆ. ಸ್ವಾತಂತ್ರ್ಯ ನಂತರ ನಡೆದ ಚುನಾವಣೆಗಳಲ್ಲಿ ಕಾಂಗ್ರೆಸ್ ಯಾವ ರೀತಿ ಗೆಲ್ಲುತ್ತಿತ್ತು ಎಂಬುದು ಗೊತ್ತಿದೆ. ಇವಿಎಂ ಬಂದನಂತರ ಚುನಾವಣಾ ಅಕ್ರಮಕ್ಕೆ ತೆರೆ ಬಿದ್ದಿದೆ. ಇಡೀ ವಿಶ್ವವೇ ಭಾರತದ ಚುನಾವಣಾ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಯಾವ ಪುರುಷಾರ್ಥಕ್ಕೆ ರಾಹುಲ್ ಗಾಂಧಿ ರಾಜ್ಯಕ್ಕೆ ಬರ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಹಾಗು ಆನಂತರ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ‌ಕಾಂಗ್ರೆಸ್ ಗೆದ್ದಾಗ ಇವಿಎಂ ಸರಿಯಾಗಿ ಇದ್ದವಾ? ಎಂದು ಪ್ರಶ್ನಿಸಿದ ಅವರು, ನೈತಿಕತೆಯೇ ಇಲ್ಲದ ಗಲೀಜು ವ್ಯಕ್ತಿಯಂತೆ ರಾಹುಲ್ ಗಾಂಧಿ ವರ್ತಿಸುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುಂದಿಟ್ಟುಕೊಂಡು ಇಡೀ ದೇಶದಾದ್ಯಂತ ವಿದ್ರೋಹದ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಿದೆ.
ವೇಮುಲ ಕಾನೂನನ್ನು ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಚುನಾವಣೆಯಲ್ಲಿ ಮೊದಲು ಅಕ್ರಮ ನಡೆಸಿದ್ದು ಕಾಂಗ್ರೆಸ್ ನಾಯಕಿ ಇಂದಿರಾಗಾಂಧಿ. ಚುನಾವಣಾ ಅಕ್ರಮದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಇಂದಿರಾಗಾಂಧಿಗೆ ಚೀಮಾರಿ ಹಾಕಿತ್ತು. ಆಗ ಇಂದಿರಾಗಾಂಧಿ ತಪ್ಪಿಸಿಕೊಳ್ಳಲು ತುರ್ತು ಪರಿಸ್ಥಿತಿ ಹೇರಿದ್ದರು. ಚುನಾವಣಾ ಅಕ್ರಮದ ರೂವಾರಿ ಕಾಂಗ್ರೆಸ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

18 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

18 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

18 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

18 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

18 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

18 hours ago