ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್ ಶಿವರಾಮು ತಿಳಿಸಿದರು.
ಅಂದು ಬೆಳಿಗ್ಗೆ 10;30 ಕ್ಕೆ ಮಹರಾಜ ಕಾಲೇಜು ಮೈದಾನದಲ್ಲಿ ಜಮಾವಣೆಗೊಂಡು ಕೋರ್ಟ್ ಬಳಿಯ ಮಹಾತ್ಮಗಾಂಧಿ ಪ್ರತಿಮೆಗೆ ಹಾರ ಹಾಕಿ ನಮಿಸಿ, ನಂತರ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಗೋಷ್ಠಿಯಲ್ಲಿ ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವ ಒಂದೇ ಒಂದು ಅಜೆಂಡ ಇಟ್ಟುಕೊಂಡು ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡುತ್ತಿದೆ. ಸಿದ್ದರಾಮಯ್ಯ ಅವರ ವಿರುದ್ಧದ ಹುನ್ನಾರವು ಅಹಿಂದ ಅಸ್ಥಿತ್ವಕ್ಕೆ ದೊಡ್ಡ ಪೆಟ್ಟು ಬೀಳುತ್ತದೆ. ಹೀಗಾಗಿ ಅಹಿಂದ ವರ್ಗಗಳ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದರು.
ಅಹಿಂದ ನಾಯಕತ್ವ ನಾಶಕ್ಕೆ ಹುನ್ನಾರ
ಬಿಜೆಪಿ ಜೆಡಿಎಸ್ ಪಕ್ಷಗಳು ಅಹಿಂದ ವರ್ಗಗಳ ನಾಯಕ ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿವೆ. ಅಹಿಂದ ರಾಜಕೀಯ ನಾಯಕತ್ವವನ್ನು ನಾಶಮಾಡುವುದೇ ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಕಿಡಿಕಾರಿದರು.
ರಾಜ್ಯಪಾಲರ ಮೂಲಕ ಬಿಜೆಪಿ ಷಡ್ಯಂತ್ರ
ಸಿಎಂ ಸಿದ್ದರಾಮಯ್ಯ ಅವರನ್ನು ಮುಗಿಸಲು ಕೇಂದ್ರದ ಬಿಜೆಪಿ ನಾಯಕರು ರಾಜ್ಯಪಾಲರ ಮೂಲಕ ಸುಪಾರಿ ಕೊಟ್ಟಿದ್ದಾರೆ. ರಾಜ್ಯಪಾಲರು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಕಗ್ಗೋಲೆ. ನಾಡಿನ ಶೋಷಿತ ಸಮುದಾಯ ಇದನ್ನೆಲ್ಲಾ ಗಮನಿಸುತ್ತಿದೆ ಎಂದರು.
ಸೌದಿ ಅರೇಬಿಯಾ : ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಗಲ್ಫ್ ದೇಶಗಳ ಮೇಲಿನ ದಾಳಿಗಳು ಹೆಚ್ಚಾಗುತ್ತಿದ್ದು, ಇರಾನ್ನ ಎರಡು ಕ್ಷೀಪಣಿಗಳನ್ನು ಹೊಡೆದುರುಳಿಸಿರುವುದಾಗಿ…
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…