ಮೈಸೂರು ನಗರ

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ದಾರಿ ಫೌಂಡೇಷನ್ ವತಿಯಿಂದ ನಗರದ ವಾಲ್ಮೀಕಿ ರಸ್ತೆಯಲ್ಲಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ‘ಭವಿಷ್ಯದಲ್ಲಿ ಪ್ರಜಾಪ್ರಭುತ್ವ ರಕ್ಷಣೆಯ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ವಿಷಯ ಕುರಿತ ಮುಕ್ತ ಸಂವಾದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಗೆಲುವಿಗೆ ಚಲಾಯಿತ ಮತಗಳ ಪೈಕಿ ಶೇ.50ರಷ್ಟನ್ನು ನಿಗದಿಪಡಿಸಬೇಕು. ಈಗ ಆಯ್ಕೆಯಾದ ಬಳಿಕ 5 ವರ್ಷಗಳು ಚುನಾಯಿತ ಪ್ರತಿನಿಧಿಗಳು ಏನು ಮಾಡಿದರೂ ಕೇಳುವಂತಿಲ್ಲ ಎಂಬಂತಿದೆ, ಇದು ಹೋಗಬೇಕು. ಚುನಾಯಿತ ಪ್ರತಿನಿಧಿಗಳು ಮತದಾರರಿಗೆ ಉತ್ತರದಾಯಿಗಳಾಗಿರಬೇಕು. ವಾಪಸ್ ಕರೆಸಿಕೊಳ್ಳುವ ಅಧಿಕಾರ ಇದ್ದಲ್ಲಿ ಭಯದಿಂದ ಜನರ ಕೆಲಸ ಮಾಡುತ್ತಾರೆ. ಚುನಾಯಿತ ಪ್ರತಿನಿಧಿಗಳು ಪ್ರಜೆಗಳ ಗುಲಾಮರಾಗಿರಬೇಕೇ ಹೊರತು ಪ್ರಜೆಗಳನ್ನೇ ತಮ್ಮ ಗುಲಾಮರನ್ನಾಗಿ ಮಾಡಿಕೊಳ್ಳಬಾರದು ಎಂದು ಮಾರ್ಮಿಕವಾಗಿ ಹೇಳಿದರು.

ಈಗ ಶೇ.50ರಷ್ಟು ಮತದಾನ ಆಗದಿದ್ದರೂ ಚಲಾಯಿತ ಮತಗಳಲ್ಲಿ ಶೇ.50 ಮತಗಳನ್ನು ಪಡೆಯದಿದ್ದರೂ ಹೆಚ್ಚು ಮತ ಪಡೆದವರನ್ನು ಚುನಾಯಿತ ಎಂದು ಘೋಷಿಸಲಾಗುತ್ತಿದೆ. ಇದ್ಯಾವ ರೀತಿಯ ಪ್ರಜಾಪ್ರಭುತ್ವ ಇದು ತಪ್ಪಬೇಕು. ಗೆಲುವಿಗೆ ಚಲಾಯಿತ ಮತಗಳಲ್ಲಿ ಶೇ.50ರಷ್ಟು ನಿಗದಿಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿ.ನಟರಾಜ್ ಮಾತನಾಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ದಾರಿ ಫೌಂಡೇಷನ್ ಅಧ್ಯಕ್ಷ ಎಲ್.ರಂಗಯ್ಯ, ಕಾರ್ಯದರ್ಶಿ ತಗಡೂರು ವೀರೇಶ್‌ಕುಮಾರ್ ಮಹಾಮನೆ, ಸಂಚಾಲಕ ಪ್ರಭಾಕರ್, ಐಕ್ಯೂಎಸಿ ಸಂಚಾಲಕ ಡಾ.ಎಸ್.ಮುತ್ತುರಾಜ, ಖಜಾಂಚಿ ರಾಘವೇಂದ್ರ, ಮಲ್ಲಣ್ಣ, ತೋಂಟೇಶ್, ಐಕ್ಯತಾ, ಮೈಸೂರು ಎಂ.ಮಹಾಲಿಂಗ, ವಿದ್ಯಾರ್ಥಿನಿ ಅಧ್ಯಕ್ಷರಾದ ಎಸ್.ಜೆ.ಸಿಂಚನಾ, ಕಾರ್ಯದರ್ಶಿ ಸೈಯದಾ ನೂರೇನ್, ತನುಶ್ರೀ, ಪಲ್ಲವಿ ಮತ್ತಿತರರು ಉಪಸ್ಥಿತರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

11 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

20 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

20 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

20 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

20 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

20 hours ago