ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಹೊರಡಿಸಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.
ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಬೆಟ್ಟಕ್ಕೆ ಭೇಟಿ ನೀಡುವ ಸಾರ್ವಜನಿಕರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…