ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಹೊರಡಿಸಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.
ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಬೆಟ್ಟಕ್ಕೆ ಭೇಟಿ ನೀಡುವ ಸಾರ್ವಜನಿಕರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…