ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು, ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಹೊರಡಿಸಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.
ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು, ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಬೆಟ್ಟಕ್ಕೆ ಭೇಟಿ ನೀಡುವ ಸಾರ್ವಜನಿಕರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ದಿನೇಶ್ ಗೂಳಿಗೌಡ ಅವರ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…