ಮೈಸೂರು ನಗರ

ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನೂತನ ಯುನಿಟಿ ಮಾಲ್‌ ನಿರ್ಮಾಣ: ಸಂಸದ ಯದುವೀರ್‌ ಒಡೆಯರ್‌ ಸ್ಥಳ ಪರಿಶೀಲನೆ

ಮೈಸೂರು: ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ನೂತನ ಯುನಿಟಿ ಮಾಲ್‌ ನಿರ್ಮಾಣ ಆಗಲಿರುವ ಹಿನ್ನೆಲೆಯಲ್ಲಿ ಇಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಸ್ಥಳ ಪರಿಶೀಲನೆ ನಡೆಸಿದರು.

ಕೇಂದ್ರ ಸರ್ಕಾರದ ಯೋಜನೆಯಡಿ 193 ಕೋಟಿ ರೂ ವೆಚ್ಚದಲ್ಲಿ ಯುನಿಟಿ ಮಾಲ್‌ ನಿರ್ಮಾಣಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದ ಯದುವೀರ್‌ ಒಡೆಯರ್‌ ಸ್ಥಳ ಪರಿಶೀಲನೆ ನಡೆಸಿದರು. ಯದುವೀರ್‌ ಅವರಿಗೆ ಶಾಸಕ ಶ್ರೀವತ್ಸ ಸಾಥ್‌ ನೀಡಿದರು.

ಈ ವೇಳೆ ಮಾತನಾಡಿದ ಸಂಸದರು, ಮೈಸೂರಿನ ವಸ್ತುಪ್ರದೇಶದ ಆವರಣದ ಮಾಲ್‌ನಲ್ಲಿ 99 ಮಳಿಗೆಗಳು ಇರುತ್ತದೆ. ಮೈಸೂರಿನ ಪರಂಪರೆ ಸಾರುವ ನಿಟ್ಟಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಮೈಸೂರಿನ ವಸ್ತುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಎಲ್ಲಾ ರೀತಿಯ ಅಂಗಡಿಗಳನ್ನು ಕೂಡ ಇಲ್ಲಿ ತೆರೆಯಲು ನಿರ್ಧಾರ ಮಾಡಲಾಗಿದೆ.

ಲೋಕಲ್ ಪ್ರಾಡಕ್ಟ್‌ಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ಇದಕ್ಕೆ ರಾಜ್ಯ ಸರ್ಕಾರ ಜಾಗ ನೀಡಿದೆ. ಕೇಂದ್ರ ಸರ್ಕಾರ ಸಂಪೂರ್ಣ ಹಣ ನೀಡುತ್ತದೆ. ಆರುವರೆ ಎಕರೆ ಜಾಗದಲ್ಲಿ ಈ ಮಾಲ್ ನಿರ್ಮಾಣ ಆಗಲಿದ್ದು, ಪಾರ್ಕಿಂಗ್ ಸೇರಿ ಎಲ್ಲವೂ ಕೂಡ ಇಲ್ಲೆ ಆಗುತ್ತದೆ ಎಂದು ಹೇಳಿದರು.

ಇನ್ನು ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಸಲುವಾಗಿ ಮಾಲ್ ನಿರ್ಮಾಣ ಮಾಡುತ್ತಿದ್ದೇವೆ. ಹೆಚ್ಚಿನ ಜನ ಮುಂದಿನ ದಿನಗಳಲ್ಲಿ ಇಲ್ಲಿ ಬರುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಇಲ್ಲಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ಸಿದ್ಧಪಡಿಸುತ್ತೇವೆ. ವಾರಾಂತ್ಯದಲ್ಲಿ ಸಂತೆಗಳನ್ನು ಕೂಡ ಆಯೋಜಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

1 hour ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

1 hour ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

2 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

2 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

2 hours ago