ಮೈಸೂರು: ಮೈಸೂರು ಭಾಗದಲ್ಲಿ ನಿರಂತರವಾಗಿ ಹುಲಿ ದಾಳಿಯಾಗುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘಟನೆ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರಣ್ಯ ಸಚಿವರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತರು, ಮಾನವ-ಕಾಡು ಪ್ರಾಣಿಗಳ ನಡುವಿನ ಸಂಘರ್ಷ ತಡೆಯಬೇಕು. ಅರಣ್ಯ ಇಲಾಖೆ ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…