ಮೈಸೂರು ನಗರ

ದಸರಾ ಉದ್ಘಾಟಕರ ವಿವಾದ ವಿಚಾರ: ವಿರೋಧಿಗಳಿಗೆ ಸಂವಿಧಾನ ಬೀಗ ಹಾಕಿದೆ ಎಂದ ಎಚ್‌ಸಿಎಂ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ಪೀಠಿಕೆಯನ್ನು ಟೌನ್ ಮುಂದೆ ಹಾಕಿದ್ದೇವೆ. ಭಾರತದಲ್ಲಿ 130,140 ಕೋಟಿ ಜನ ಇದ್ದಾರೆ. ಅವರಿಗೆ ಮುಕ್ತ ಧಾರ್ಮಿಕ ಆಚರಣೆಗೆ ಅವಕಾಶ ಕೊಟ್ಟಿದ್ದೇವೆ. ಇದರ ಉದ್ದೇಶ ಬಹುತ್ವ ಕಾಪಾಡೋದು. ಗೊಂದಲಕ್ಕೆ ಅನುಮಾನಕ್ಕೆ, ಅಪಮಾನಕ್ಕೆ, ದ್ವೇಷಕ್ಕೆ ಅವಕಾಶ ಇಲ್ಲ ಎಂದು ಸಂವಿಧಾನ ಹೇಳಿದೆ. ಇದನ್ನೇ ಸುಪ್ರೀಂ ಕೋರ್ಟ್ ಹೇಳಿದೆ. ವಿರೋಧಿಗಳಿಗೆ ಸಂವಿಧಾನ ಬೀಗ ಹಾಕಿದೆ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದರು. ಇನ್ನು ವಿರೋಧಿಗಳಿಗೆ ಇನ್ನು ಮುಂದೆ ಬುದ್ಧಿ ಬರಬೇಕು. ಅತ್ಯಂತ ಪ್ರೀತಿಯಿಂದ ಎಲ್ಲರೂ ದಸರಾ ಆಚರಣೆ ಮಾಡಬೇಕು. ಎಲ್ಲರೂ ಭಾಗಿಯಾಗಿ ಎಂದು ನಾನು ಆಹ್ವಾನ ಕೊಡುತ್ತೇನೆ ಎಂದರು.

ಇನ್ನು ರಾಜ್ಯದಲ್ಲಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸ್ವಾತಂತ್ಯಕ್ಕಿಂತ ಮುಂಚೆ ವರ್ಣಾಶ್ರಮ ಮಾಡುತ್ತಿದ್ದರು. ಬಿಜೆಪಿಗೆ ಇದರಲ್ಲಿ ನಂಬಿಕೆ. ಪ್ರತಿ ಪ್ರಜೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಬದುಕು ಹೇಗಿದೆ ಎಂದು ತಿಳಿದುಕೊಳ್ಳೋದಕ್ಕೆ ನಾವು ಸಮೀಕ್ಷೆ ಮಾಡುತ್ತಿದ್ದೇವೆ. ಇದರಲ್ಲಿ ಬಿಜೆಪಿ ವಿರೋಧ ಮಾಡೋದಕ್ಕೆ ಏನಿದೆ ಎಂದು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಇರುವ ಜಾತಿಗಳನ್ನು ಸಮೀಕ್ಷೆ ಮಾಡುತ್ತಿದ್ದೇವೆ. ನಾವು ಯಾವ ಜಾತಿಯನ್ನು ಹುಟ್ಟು ಹಾಕುತ್ತಿಲ್ಲ. ಹಿಂದೂಗಳನ್ನು ಯಾರು ಟಾರ್ಗೆಟ್ ಮಾಡ್ತಿಲ್ಲ. ಇದು ಬಿಜೆಪಿ ಹೇಳುವ ಅಪ್ಪಟ್ಟ ಸುಳ್ಳು. ಹಿಂದೂ ಧರ್ಮ ಒಡೆಯುವ ಪ್ರಮೇಯ ನಮಗೆ ಇಲ್ಲ. ಅಂಬೇಡ್ಕರ್ ಹೇಳಿದ್ರು ನಾನು ಹಿಂದೂವಾಗಿ ಹುಟ್ಟಿದ್ದೇನೆ.

ಆದ್ರೆ ಹಿಂದೂವಾಗಿ ಸಾಯಲ್ಲ ಅಂತ ಹೇಳಿದ್ದರು. ಹಾಗಾದ್ರೆ ಹಿಂದೂ ಧರ್ಮದಲ್ಲಿ ಏನಿದೆ? ಬಲವಂತವಾಗಿ ಮತಾಂತರ ಮಾಡುವುದು ತಪ್ಪು. ಸಚಿವ ಸಂಪುಟದಲ್ಲಿ ಯಾವ ಒಡಕು ಇರಲಿಲ್ಲ. ಒಮ್ಮತದ ತೀರ್ಮಾನದ ಮೇಲೆ ನೂತನ ಸಮೀಕ್ಷೆ ಮಾಡುತ್ತಿದ್ದೇವೆ. ಲಿಂಗಾಯತ ಒಕ್ಕಲಿಗ ಸಮುದಾಯದವರು ಅವರವರ ವಿಚಾರಕ್ಕೆ ಸಭೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಅಧ್ಯಾಯ ಎರಡು ಇಲ್ಲಿಂದು ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

24 mins ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

32 mins ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

43 mins ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

48 mins ago

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

12 hours ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

12 hours ago