ಮೈಸೂರು ನಗರ

ದಸರಾ ಉದ್ಘಾಟಕರ ವಿವಾದ ವಿಚಾರ: ವಿರೋಧಿಗಳಿಗೆ ಸಂವಿಧಾನ ಬೀಗ ಹಾಕಿದೆ ಎಂದ ಎಚ್‌ಸಿಎಂ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ಪೀಠಿಕೆಯನ್ನು ಟೌನ್ ಮುಂದೆ ಹಾಕಿದ್ದೇವೆ. ಭಾರತದಲ್ಲಿ 130,140 ಕೋಟಿ ಜನ ಇದ್ದಾರೆ. ಅವರಿಗೆ ಮುಕ್ತ ಧಾರ್ಮಿಕ ಆಚರಣೆಗೆ ಅವಕಾಶ ಕೊಟ್ಟಿದ್ದೇವೆ. ಇದರ ಉದ್ದೇಶ ಬಹುತ್ವ ಕಾಪಾಡೋದು. ಗೊಂದಲಕ್ಕೆ ಅನುಮಾನಕ್ಕೆ, ಅಪಮಾನಕ್ಕೆ, ದ್ವೇಷಕ್ಕೆ ಅವಕಾಶ ಇಲ್ಲ ಎಂದು ಸಂವಿಧಾನ ಹೇಳಿದೆ. ಇದನ್ನೇ ಸುಪ್ರೀಂ ಕೋರ್ಟ್ ಹೇಳಿದೆ. ವಿರೋಧಿಗಳಿಗೆ ಸಂವಿಧಾನ ಬೀಗ ಹಾಕಿದೆ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದರು. ಇನ್ನು ವಿರೋಧಿಗಳಿಗೆ ಇನ್ನು ಮುಂದೆ ಬುದ್ಧಿ ಬರಬೇಕು. ಅತ್ಯಂತ ಪ್ರೀತಿಯಿಂದ ಎಲ್ಲರೂ ದಸರಾ ಆಚರಣೆ ಮಾಡಬೇಕು. ಎಲ್ಲರೂ ಭಾಗಿಯಾಗಿ ಎಂದು ನಾನು ಆಹ್ವಾನ ಕೊಡುತ್ತೇನೆ ಎಂದರು.

ಇನ್ನು ರಾಜ್ಯದಲ್ಲಿ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸ್ವಾತಂತ್ಯಕ್ಕಿಂತ ಮುಂಚೆ ವರ್ಣಾಶ್ರಮ ಮಾಡುತ್ತಿದ್ದರು. ಬಿಜೆಪಿಗೆ ಇದರಲ್ಲಿ ನಂಬಿಕೆ. ಪ್ರತಿ ಪ್ರಜೆಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಬದುಕು ಹೇಗಿದೆ ಎಂದು ತಿಳಿದುಕೊಳ್ಳೋದಕ್ಕೆ ನಾವು ಸಮೀಕ್ಷೆ ಮಾಡುತ್ತಿದ್ದೇವೆ. ಇದರಲ್ಲಿ ಬಿಜೆಪಿ ವಿರೋಧ ಮಾಡೋದಕ್ಕೆ ಏನಿದೆ ಎಂದು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಇರುವ ಜಾತಿಗಳನ್ನು ಸಮೀಕ್ಷೆ ಮಾಡುತ್ತಿದ್ದೇವೆ. ನಾವು ಯಾವ ಜಾತಿಯನ್ನು ಹುಟ್ಟು ಹಾಕುತ್ತಿಲ್ಲ. ಹಿಂದೂಗಳನ್ನು ಯಾರು ಟಾರ್ಗೆಟ್ ಮಾಡ್ತಿಲ್ಲ. ಇದು ಬಿಜೆಪಿ ಹೇಳುವ ಅಪ್ಪಟ್ಟ ಸುಳ್ಳು. ಹಿಂದೂ ಧರ್ಮ ಒಡೆಯುವ ಪ್ರಮೇಯ ನಮಗೆ ಇಲ್ಲ. ಅಂಬೇಡ್ಕರ್ ಹೇಳಿದ್ರು ನಾನು ಹಿಂದೂವಾಗಿ ಹುಟ್ಟಿದ್ದೇನೆ.

ಆದ್ರೆ ಹಿಂದೂವಾಗಿ ಸಾಯಲ್ಲ ಅಂತ ಹೇಳಿದ್ದರು. ಹಾಗಾದ್ರೆ ಹಿಂದೂ ಧರ್ಮದಲ್ಲಿ ಏನಿದೆ? ಬಲವಂತವಾಗಿ ಮತಾಂತರ ಮಾಡುವುದು ತಪ್ಪು. ಸಚಿವ ಸಂಪುಟದಲ್ಲಿ ಯಾವ ಒಡಕು ಇರಲಿಲ್ಲ. ಒಮ್ಮತದ ತೀರ್ಮಾನದ ಮೇಲೆ ನೂತನ ಸಮೀಕ್ಷೆ ಮಾಡುತ್ತಿದ್ದೇವೆ. ಲಿಂಗಾಯತ ಒಕ್ಕಲಿಗ ಸಮುದಾಯದವರು ಅವರವರ ವಿಚಾರಕ್ಕೆ ಸಭೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

4 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

11 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

13 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

14 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

15 hours ago