ಮೈಸೂರು: ಇದೇ ತಿಂಗಳ 28 ರಂದು ನಡೆಯಲಿರುವ ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆಗೆ ನಡೆಯಲಿದೆ. ಆದರೆ, ಈ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿದೆ.
ಚುನಾವಣೆಯ ಕ್ರಮವಾಗಿ ನಡೆಯುತ್ತಿಲ್ಲ. ನೀತಿ ನಿಬಂಧನೆಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಲ್ಲಿನ ಷೇರುದಾರರು ಆರೋಪಿಸುತ್ತಿದ್ದಾರೆ.
ಹಾಲು ಉತ್ಪಾದಕ ಸಂಘ ಒಕ್ಕೂಟದಲ್ಲಿ ಸದಸ್ಯತ್ವ ಪಡೆಯದೆ ಇರುವವರು ಮತ್ತು ಪತ್ನಿ ಸದಸ್ಯರಾಗಿದ್ದರೆ, ಗಂಡ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಇದು ಅಕ್ರಮವಾಗುತ್ತದೆ ಹಾಗಾಗಿ ಈ ಚುನಾವಣೆಯನ್ನ ಅಸಿಂಧು ಮಾಡಬೇಕು ಮತ್ತು ಕಳೆದ 23 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಅಧ್ಯಕ್ಷರಾಗಿ ನಾಗೇಂದ್ರ ಮತ್ತು ಕಾರ್ಯದರ್ಶಿಯಾಗಿ ಸೀತಾರಾಮ್ ಅವರೇ ಮುಂದುವರೆದುಕೊಂಡು ಬಂದಿದ್ದಾರೆ ಎಂದು ಆಕ್ಷೇಪಿಸಿದರು.
ಬೋನಸ್ ಹಣ ಕೊಡುವಾಗ ಷೇರುದಾರರ ಬಳಿ ಖಾಲಿ ಕಾಗದದ ಮೇಲೆ ಸಹಿ ಮಾಡಿಸಿಕೊಂಡು ಅವರು ಆ ಕಾಗದದ ಮೇಲೆ ಅಧ್ಯಕ್ಷ ಕಾರ್ಯದರ್ಶಿಗಳಾಗಿ ಮುಂದುವರೆಯಲು ನಮ್ಮ ಅಭ್ಯಂತರ ಇಲ್ಲ ಇವರನ್ನೇ ಮುಂದುವರಿಸಬಹುದು ಎಂದು ಷೇರುದಾರರು ಅಭಿಪ್ರಾಯದಂತೆ ತಾವೇ ಖಾಲಿ ಕಾಗದದ ಮೇಲೆ ಬರೆದುಕೊಂಡು ಅದನ್ನ ಮೇಲಧಿಕಾರಿಗಳಿಗೆ ಕೊಟ್ಟು ಇದುವರೆಗೂ ಮುಂದುವರೆದುಕೊಂಡು ಬಂದಿದ್ದಾರೆ. ಅಮೇಲೆ ವಾರ್ಷಿಕ ಸಭೆಗಳನ್ನೂ ಮಾಡಲ್ಲ, ಸಂಸದ ವೆಚ್ಚದ ಬಗ್ಗೆ ಮಾಹಿತಿಯನ್ನೂ ಕೊಡುವುದಿಲ್ಲ. ಈಗಲೂ ಅವರೇ ಚುನಾವಣೆ ಸ್ಪರ್ಧೆ ಮಾಡಿದ್ದಾರೆ. ಜೊತೆಗೆ ಇವರಲ್ಲದೆ, 12 ಸ್ಥಾನಕ್ಕೆ 21 ಜನ ಸ್ಪರ್ಧೆ ಮಾಡಿದ್ದಾರೆ. ಇವರಲ್ಲಿ ಕೆಲವರು ಚುನಾವಣೆಗೆ ಸ್ಪರ್ಧೆ ಮಾಡಲು ಅನರ್ಹರು. ಸಂಘದ ಸದಸ್ಯರಲ್ಲದವರೂ ಚುನಾವಣೆಗೆ ನಿಂತಿದ್ದಾರೆ. ಹಾಗಾಗಿ ಈ ಚುನಾವಣೆಯನ್ನ ಮುಂದೂಡಬೇಕು ಮತ್ತು ಚುನಾವಣೆಯನ್ನು ಕ್ರಮಬದ್ಧವಾಗಿ ನಡೆಸಬೇಕು ಎಂದು ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಒಕ್ಕೂಟ ಸದಸ್ಯರು ಆಗ್ರಹಿಸಿದ್ದಾರೆ.
ಈ ವೇಳೆ ಡೈರಿ ಬಳಿ ಬಂದು ಕೆಲಕಾಲ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘದ ಸದಸ್ಯರ ಮತ್ತು ಮುಖಂಡರಾದ ನಾಗರಾಜು,ಧನಂಜಯ, ನಾಗಣ್ಣ,ಜಯರಾಮು,ಅಮಿತ್,ಕೃಷ್ಣ,ಮಾದೇಶ್ ಸೇರಿದಂತೆ ಹಲವಾರು ಭಾಗಿಯಾಗಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…