ಮೈಸೂರು ನಗರ

ಕೂರ್ಗಳ್ಳಿ: ಹಾಲು ಉತ್ಪಾದಕ ಸಹಕಾರ ಸಂಘದ ಚುನಾವಣೆಗೆ ಸದಸ್ಯರಿಂದಲೇ ಆಕ್ಷೇಪ

ಮೈಸೂರು: ಇದೇ ತಿಂಗಳ 28 ರಂದು ನಡೆಯಲಿರುವ ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆಗೆ ನಡೆಯಲಿದೆ. ಆದರೆ, ಈ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿದೆ.

ಚುನಾವಣೆಯ ಕ್ರಮವಾಗಿ ನಡೆಯುತ್ತಿಲ್ಲ. ನೀತಿ ನಿಬಂಧನೆಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಲ್ಲಿನ ಷೇರುದಾರರು ಆರೋಪಿಸುತ್ತಿದ್ದಾರೆ.

ಹಾಲು ಉತ್ಪಾದಕ ಸಂಘ ಒಕ್ಕೂಟದಲ್ಲಿ ಸದಸ್ಯತ್ವ ಪಡೆಯದೆ ಇರುವವರು ಮತ್ತು ಪತ್ನಿ ಸದಸ್ಯರಾಗಿದ್ದರೆ, ಗಂಡ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಇದು ಅಕ್ರಮವಾಗುತ್ತದೆ ಹಾಗಾಗಿ ಈ ಚುನಾವಣೆಯನ್ನ ಅಸಿಂಧು ಮಾಡಬೇಕು ಮತ್ತು ಕಳೆದ 23 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಅಧ್ಯಕ್ಷರಾಗಿ ನಾಗೇಂದ್ರ ಮತ್ತು ಕಾರ್ಯದರ್ಶಿಯಾಗಿ ಸೀತಾರಾಮ್ ಅವರೇ ಮುಂದುವರೆದುಕೊಂಡು ಬಂದಿದ್ದಾರೆ ಎಂದು ಆಕ್ಷೇಪಿಸಿದರು.

ಬೋನಸ್ ಹಣ ಕೊಡುವಾಗ ಷೇರುದಾರರ ಬಳಿ ಖಾಲಿ ಕಾಗದದ ಮೇಲೆ ಸಹಿ ಮಾಡಿಸಿಕೊಂಡು ಅವರು ಆ ಕಾಗದದ ಮೇಲೆ ಅಧ್ಯಕ್ಷ ಕಾರ್ಯದರ್ಶಿಗಳಾಗಿ ಮುಂದುವರೆಯಲು ನಮ್ಮ ಅಭ್ಯಂತರ ಇಲ್ಲ ಇವರನ್ನೇ ಮುಂದುವರಿಸಬಹುದು ಎಂದು ಷೇರುದಾರರು ಅಭಿಪ್ರಾಯದಂತೆ ತಾವೇ ಖಾಲಿ ಕಾಗದದ ಮೇಲೆ ಬರೆದುಕೊಂಡು ಅದನ್ನ ಮೇಲಧಿಕಾರಿಗಳಿಗೆ ಕೊಟ್ಟು ಇದುವರೆಗೂ ಮುಂದುವರೆದುಕೊಂಡು ಬಂದಿದ್ದಾರೆ. ಅಮೇಲೆ ವಾರ್ಷಿಕ ಸಭೆಗಳನ್ನೂ ಮಾಡಲ್ಲ, ಸಂಸದ ವೆಚ್ಚದ ಬಗ್ಗೆ ಮಾಹಿತಿಯನ್ನೂ ಕೊಡುವುದಿಲ್ಲ. ಈಗಲೂ ಅವರೇ ಚುನಾವಣೆ ಸ್ಪರ್ಧೆ ಮಾಡಿದ್ದಾರೆ. ಜೊತೆಗೆ ಇವರಲ್ಲದೆ, 12 ಸ್ಥಾನಕ್ಕೆ 21 ಜನ ಸ್ಪರ್ಧೆ ಮಾಡಿದ್ದಾರೆ. ಇವರಲ್ಲಿ ಕೆಲವರು ಚುನಾವಣೆಗೆ ಸ್ಪರ್ಧೆ ಮಾಡಲು ಅನರ್ಹರು. ಸಂಘದ ಸದಸ್ಯರಲ್ಲದವರೂ ಚುನಾವಣೆಗೆ ನಿಂತಿದ್ದಾರೆ. ಹಾಗಾಗಿ ಈ ಚುನಾವಣೆಯನ್ನ ಮುಂದೂಡಬೇಕು ಮತ್ತು ಚುನಾವಣೆಯನ್ನು ಕ್ರಮಬದ್ಧವಾಗಿ ನಡೆಸಬೇಕು ಎಂದು ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಒಕ್ಕೂಟ ಸದಸ್ಯರು ಆಗ್ರಹಿಸಿದ್ದಾರೆ.

ಈ ವೇಳೆ ಡೈರಿ ಬಳಿ ಬಂದು ಕೆಲಕಾಲ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘದ ಸದಸ್ಯರ ಮತ್ತು ಮುಖಂಡರಾದ ನಾಗರಾಜು,ಧನಂಜಯ, ನಾಗಣ್ಣ,ಜಯರಾಮು,ಅಮಿತ್,ಕೃಷ್ಣ,ಮಾದೇಶ್ ಸೇರಿದಂತೆ ಹಲವಾರು ಭಾಗಿಯಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

23 mins ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

1 hour ago

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

5 hours ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

5 hours ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

10 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

10 hours ago