ಮೈಸೂರು ನಗರ

ಕೂರ್ಗಳ್ಳಿ: ಹಾಲು ಉತ್ಪಾದಕ ಸಹಕಾರ ಸಂಘದ ಚುನಾವಣೆಗೆ ಸದಸ್ಯರಿಂದಲೇ ಆಕ್ಷೇಪ

ಮೈಸೂರು: ಇದೇ ತಿಂಗಳ 28 ರಂದು ನಡೆಯಲಿರುವ ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ನಿರ್ದೇಶಕ ಸ್ಥಾನಕ್ಕಾಗಿ ಚುನಾವಣೆಗೆ ನಡೆಯಲಿದೆ. ಆದರೆ, ಈ ಚುನಾವಣೆಗೆ ಸ್ಥಳೀಯ ಹಾಲು ಒಕ್ಕೂಟದ ಷೇರುದಾರರಿಂದಲೇ ಆಕ್ಷೇಪ ಕೇಳಿ ಬಂದಿದೆ.

ಚುನಾವಣೆಯ ಕ್ರಮವಾಗಿ ನಡೆಯುತ್ತಿಲ್ಲ. ನೀತಿ ನಿಬಂಧನೆಗಳನ್ನು ಗಾಳಿಗೆ ತೂರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಲ್ಲಿನ ಷೇರುದಾರರು ಆರೋಪಿಸುತ್ತಿದ್ದಾರೆ.

ಹಾಲು ಉತ್ಪಾದಕ ಸಂಘ ಒಕ್ಕೂಟದಲ್ಲಿ ಸದಸ್ಯತ್ವ ಪಡೆಯದೆ ಇರುವವರು ಮತ್ತು ಪತ್ನಿ ಸದಸ್ಯರಾಗಿದ್ದರೆ, ಗಂಡ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ ಇದು ಅಕ್ರಮವಾಗುತ್ತದೆ ಹಾಗಾಗಿ ಈ ಚುನಾವಣೆಯನ್ನ ಅಸಿಂಧು ಮಾಡಬೇಕು ಮತ್ತು ಕಳೆದ 23 ವರ್ಷಗಳಿಂದ ನಮ್ಮ ಗ್ರಾಮದಲ್ಲಿ ಅಧ್ಯಕ್ಷರಾಗಿ ನಾಗೇಂದ್ರ ಮತ್ತು ಕಾರ್ಯದರ್ಶಿಯಾಗಿ ಸೀತಾರಾಮ್ ಅವರೇ ಮುಂದುವರೆದುಕೊಂಡು ಬಂದಿದ್ದಾರೆ ಎಂದು ಆಕ್ಷೇಪಿಸಿದರು.

ಬೋನಸ್ ಹಣ ಕೊಡುವಾಗ ಷೇರುದಾರರ ಬಳಿ ಖಾಲಿ ಕಾಗದದ ಮೇಲೆ ಸಹಿ ಮಾಡಿಸಿಕೊಂಡು ಅವರು ಆ ಕಾಗದದ ಮೇಲೆ ಅಧ್ಯಕ್ಷ ಕಾರ್ಯದರ್ಶಿಗಳಾಗಿ ಮುಂದುವರೆಯಲು ನಮ್ಮ ಅಭ್ಯಂತರ ಇಲ್ಲ ಇವರನ್ನೇ ಮುಂದುವರಿಸಬಹುದು ಎಂದು ಷೇರುದಾರರು ಅಭಿಪ್ರಾಯದಂತೆ ತಾವೇ ಖಾಲಿ ಕಾಗದದ ಮೇಲೆ ಬರೆದುಕೊಂಡು ಅದನ್ನ ಮೇಲಧಿಕಾರಿಗಳಿಗೆ ಕೊಟ್ಟು ಇದುವರೆಗೂ ಮುಂದುವರೆದುಕೊಂಡು ಬಂದಿದ್ದಾರೆ. ಅಮೇಲೆ ವಾರ್ಷಿಕ ಸಭೆಗಳನ್ನೂ ಮಾಡಲ್ಲ, ಸಂಸದ ವೆಚ್ಚದ ಬಗ್ಗೆ ಮಾಹಿತಿಯನ್ನೂ ಕೊಡುವುದಿಲ್ಲ. ಈಗಲೂ ಅವರೇ ಚುನಾವಣೆ ಸ್ಪರ್ಧೆ ಮಾಡಿದ್ದಾರೆ. ಜೊತೆಗೆ ಇವರಲ್ಲದೆ, 12 ಸ್ಥಾನಕ್ಕೆ 21 ಜನ ಸ್ಪರ್ಧೆ ಮಾಡಿದ್ದಾರೆ. ಇವರಲ್ಲಿ ಕೆಲವರು ಚುನಾವಣೆಗೆ ಸ್ಪರ್ಧೆ ಮಾಡಲು ಅನರ್ಹರು. ಸಂಘದ ಸದಸ್ಯರಲ್ಲದವರೂ ಚುನಾವಣೆಗೆ ನಿಂತಿದ್ದಾರೆ. ಹಾಗಾಗಿ ಈ ಚುನಾವಣೆಯನ್ನ ಮುಂದೂಡಬೇಕು ಮತ್ತು ಚುನಾವಣೆಯನ್ನು ಕ್ರಮಬದ್ಧವಾಗಿ ನಡೆಸಬೇಕು ಎಂದು ಕೂರ್ಗಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಒಕ್ಕೂಟ ಸದಸ್ಯರು ಆಗ್ರಹಿಸಿದ್ದಾರೆ.

ಈ ವೇಳೆ ಡೈರಿ ಬಳಿ ಬಂದು ಕೆಲಕಾಲ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಘದ ಸದಸ್ಯರ ಮತ್ತು ಮುಖಂಡರಾದ ನಾಗರಾಜು,ಧನಂಜಯ, ನಾಗಣ್ಣ,ಜಯರಾಮು,ಅಮಿತ್,ಕೃಷ್ಣ,ಮಾದೇಶ್ ಸೇರಿದಂತೆ ಹಲವಾರು ಭಾಗಿಯಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago