_Sa Ra Mahesh (1)
ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಸಿಎಂ ಅದಾಗ ಸಿದ್ದರಾಮಯ್ಯ ಕೊಟ್ಟ ಆಡಳಿತ ಎಲ್ಲಿ ಹೋಯ್ತು? ಈಗ ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರೇ ನಿಮ್ಮ ಹಿಂಬಾಲಕರಿಗೆ ಹೇಳಿ. ಈ ಬಗ್ಗೆ ಸಾರ್ವಜನಿಕ ಚರ್ಚೆ ಕೂಡ ಮಾಡೋಣ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.
ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪಂಥಾಹ್ವಾನ
ಇನ್ನು ಮೈಸೂರು ಜಿಲ್ಲೆಯಲ್ಲಿ ಕ್ರೈಮ್ ರೇಟ್ ಜಾಸ್ತಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ನಕಲಿ ಆರ್.ಟಿ.ಐ ಅಂಗ, ಪುಡಿರೌಡಿಗಳ ಅಂಗ ಇವೆಲ್ಲವೂ ತಲೆ ಎತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 2 ವರ್ಷ ಆಗೋಯ್ತು. ಇದುವರೆಗೂ ಜನರಿಗೆ ಒಂದೇ ಒಂದು ಸೂರು ಕೊಟ್ಟಿಲ್ಲ. ಸಾಲ ಮಾಡೋಕೆ ಇಷ್ಟು ವರ್ಷದ ಅನುಭವ ಬೇಕಾ? ಎಂದು ಕಿಡಿಕಾರಿದ ಅವರು, ಮಧ್ಯಮ ವರ್ಗದ ಜನರ ಪರಿಸ್ಥಿತಿ ನಿಮಗೆ ಗೊತ್ತಾ? ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…