ಮೈಸೂರು ನಗರ

ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಸಿಎಂ ಅದಾಗ ಸಿದ್ದರಾಮಯ್ಯ ಕೊಟ್ಟ ಆಡಳಿತ ಎಲ್ಲಿ ಹೋಯ್ತು? ಈಗ ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರೇ ನಿಮ್ಮ ಹಿಂಬಾಲಕರಿಗೆ ಹೇಳಿ. ಈ ಬಗ್ಗೆ ಸಾರ್ವಜನಿಕ ಚರ್ಚೆ ಕೂಡ ಮಾಡೋಣ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪ‌ಂಥಾಹ್ವಾನ

ಇನ್ನು ಮೈಸೂರು ಜಿಲ್ಲೆಯಲ್ಲಿ ಕ್ರೈಮ್ ರೇಟ್ ಜಾಸ್ತಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ನಕಲಿ ಆರ್.ಟಿ.ಐ ಅಂಗ, ಪುಡಿರೌಡಿಗಳ ಅಂಗ ಇವೆಲ್ಲವೂ ತಲೆ ಎತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 2 ವರ್ಷ ಆಗೋಯ್ತು. ಇದುವರೆಗೂ ಜನರಿಗೆ ಒಂದೇ ಒಂದು ಸೂರು ಕೊಟ್ಟಿಲ್ಲ. ಸಾಲ ಮಾಡೋಕೆ ಇಷ್ಟು ವರ್ಷದ ಅನುಭವ ಬೇಕಾ? ಎಂದು ಕಿಡಿಕಾರಿದ ಅವರು, ಮಧ್ಯಮ ವರ್ಗದ ಜನರ ಪರಿಸ್ಥಿತಿ ನಿಮಗೆ ಗೊತ್ತಾ? ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

3 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

8 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago