ಮೈಸೂರು ನಗರ

ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು ನಗರ: ರಾಜ್ಯದಲ್ಲಿ ಈಗಾಗಲೇ 7 ಲಕ್ಷದ 81 ಸಾವಿರದ 95 ಕೋಟಿ ರೂ ರಾಜ್ಯದ ಸಾಲವಿದ್ದು, 4 ಲಕ್ಷದ 95 ಸಾವಿರ ಕೋಟಿ ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಬಾರಿ ಸಿಎಂ ಅದಾಗ ಸಿದ್ದರಾಮಯ್ಯ ಕೊಟ್ಟ ಆಡಳಿತ ಎಲ್ಲಿ ಹೋಯ್ತು? ಈಗ ಇಡೀ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರೇ ನಿಮ್ಮ ಹಿಂಬಾಲಕರಿಗೆ ಹೇಳಿ. ಈ ಬಗ್ಗೆ ಸಾರ್ವಜನಿಕ ಚರ್ಚೆ ಕೂಡ ಮಾಡೋಣ ಬನ್ನಿ ಎಂದು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದರು.

ಇದನ್ನೂ ಓದಿ:- ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಸಾ.ರಾ.ಮಹೇಶ್ ಪ‌ಂಥಾಹ್ವಾನ

ಇನ್ನು ಮೈಸೂರು ಜಿಲ್ಲೆಯಲ್ಲಿ ಕ್ರೈಮ್ ರೇಟ್ ಜಾಸ್ತಿಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ನಕಲಿ ಆರ್.ಟಿ.ಐ ಅಂಗ, ಪುಡಿರೌಡಿಗಳ ಅಂಗ ಇವೆಲ್ಲವೂ ತಲೆ ಎತ್ತಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು 2 ವರ್ಷ ಆಗೋಯ್ತು. ಇದುವರೆಗೂ ಜನರಿಗೆ ಒಂದೇ ಒಂದು ಸೂರು ಕೊಟ್ಟಿಲ್ಲ. ಸಾಲ ಮಾಡೋಕೆ ಇಷ್ಟು ವರ್ಷದ ಅನುಭವ ಬೇಕಾ? ಎಂದು ಕಿಡಿಕಾರಿದ ಅವರು, ಮಧ್ಯಮ ವರ್ಗದ ಜನರ ಪರಿಸ್ಥಿತಿ ನಿಮಗೆ ಗೊತ್ತಾ? ಎಂದು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

2 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

2 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

2 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

2 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

3 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

4 hours ago