ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ.
1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್ ಗ್ರೌಂಡ್ ಬಿಲ್ಡಿಂಗ್ ನಲ್ಲಿ ಅಡುಗೆ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಹಲವಾರು ಕಾರ್ಮಿಕರನ್ನು ಡೀನ್ ಹಾಗೂ ವಾರ್ಡನ್ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕಳೆದ 2016ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಲೇಬರ್ ಕೋರ್ಟ್ ಕಳೆದ 2019ರಲ್ಲಿ ಕಾರ್ಮಿಕರಿಗೆ ಕೆಲಸ ಕೊಡಬೇಕು ಮತ್ತು ಹಳೆಯ ವೇತನ ಬಾಕಿಯನ್ನೂ ಕೊಡಬೇಕು ಎಂದು ಆದೇಶ ಹೊರಡಿಸಿತ್ತು. ಇದೆಲ್ಲದರ ಮಧ್ಯೆ ಹೈಕೋರ್ಟ್ನಲ್ಲೂ ಸಹ ಆದೇಶ ಕೂಲಿ ಕಾರ್ಮಿಕರ ಪರವೇ ಬಂದಿತ್ತು.
ಕಾರ್ಮಿಕರ ಪರ ಕೋರ್ಟ್ ಆದೇಶ ಹೊರಡಿಸಿದ್ದರೂ, ಮೈಸೂರು ಮೆಡಿಕಲ್ ಸಂಸ್ಥೆ ಕಾರ್ಮಿಕರಿಗೆ ಸುಮಾರು 42 ಲಕ್ಷ ವೇತನ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಕೋರ್ಟ್ ಆದೇಶ ಹೊರಡಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…