ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ.
1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್ ಗ್ರೌಂಡ್ ಬಿಲ್ಡಿಂಗ್ ನಲ್ಲಿ ಅಡುಗೆ ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ ಹಲವಾರು ಕಾರ್ಮಿಕರನ್ನು ಡೀನ್ ಹಾಗೂ ವಾರ್ಡನ್ ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದರು.
ಈ ಹಿನ್ನೆಲೆಯಲ್ಲಿ ಕಾರ್ಮಿಕರು ಕಳೆದ 2016ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಹಾಕಿ ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಲೇಬರ್ ಕೋರ್ಟ್ ಕಳೆದ 2019ರಲ್ಲಿ ಕಾರ್ಮಿಕರಿಗೆ ಕೆಲಸ ಕೊಡಬೇಕು ಮತ್ತು ಹಳೆಯ ವೇತನ ಬಾಕಿಯನ್ನೂ ಕೊಡಬೇಕು ಎಂದು ಆದೇಶ ಹೊರಡಿಸಿತ್ತು. ಇದೆಲ್ಲದರ ಮಧ್ಯೆ ಹೈಕೋರ್ಟ್ನಲ್ಲೂ ಸಹ ಆದೇಶ ಕೂಲಿ ಕಾರ್ಮಿಕರ ಪರವೇ ಬಂದಿತ್ತು.
ಕಾರ್ಮಿಕರ ಪರ ಕೋರ್ಟ್ ಆದೇಶ ಹೊರಡಿಸಿದ್ದರೂ, ಮೈಸೂರು ಮೆಡಿಕಲ್ ಸಂಸ್ಥೆ ಕಾರ್ಮಿಕರಿಗೆ ಸುಮಾರು 42 ಲಕ್ಷ ವೇತನ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮೈಸೂರು ಮೆಡಿಕಲ್ ಕಾಲೇಜು ಚರಾಸ್ತಿಗಳ ಜಪ್ತಿಗೆ ಕೋರ್ಟ್ ಆದೇಶ ಹೊರಡಿಸಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…