ಮೈಸೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ
ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಯಾರದರೂ ತಪ್ಪು ಮಾಡಿದರೆ ಶಿಕ್ಷೆ ಕೊಡಲಿ ಎಂದು ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಬಂದು 16 ತಿಂಗಳಾಗಿದೆ. ಈಗ ಪ್ರಕರಣ ಸಂಬಂಧ ಮಧ್ಯಂತರ ವರದಿ ತರಿಸಿಕೊಂಡಿದ್ದಾರೆ. ಅಂತಿಮ ವರದಿ ಯಾವಾಗ ಬರುತ್ತೆ ನನಗೆ ಗೊತ್ತಿಲ್ಲ ಎಂದರು.
ಇನ್ನು ಸರ್ಕಾರಗಳು ಸೈಕಲ್ ಇದ್ದ ಹಾಗೆ, ಚಕ್ರ ತಿರುಗುವ ರೀತಿ ತಿರುಗುತ್ತೆ. ನಾವು ಒಂದೇ ಒಂದು ಪ್ರಕರಣವನ್ನೂ ಈ ರೀತಿ ಮಾಡಿಲ್ಲ. ಒಂದು ದ್ವೇಷದ ರಾಜಕಾರಣವನ್ನೂ ಸಹ ಮಾಡಿಲ್ಲ. ಖುರ್ಚಿ ಇರುವವರೆಗೂ ಮಾಡುತ್ತಾರೆ ಮಾಡಲಿ ಎಂದು ಕಿಡಿಕಾರಿದರು.
ಇನ್ನು ದ್ವೇಷದ ರಾಜಕಾರಣವನ್ನು ಕಲಿಸಿಕೊಡುತ್ತಿರುವುದು ಕಾಂಗ್ರೆಸ್, ನಾವು ಕೂಡ ದ್ವೇಷದ ರಾಜಕಾರಣ ಕಲಿಯಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ನೀಡಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…