ಮೈಸೂರು ನಗರ

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಕಾಲಘಟ್ಟದ ಅಗತ್ಯವಾಗಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ ರಾಮ್ ಅವರ ಸಂಘಗಳ ಒಕ್ಕೂಟದ ವತಿಯಿಂದ ಕಲಾಮಂದಿರದದಲ್ಲಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂಬ ಅಂಬೇಡ್ಕರ್ ಅವರ ನುಡಿಯಂತೆ, ಇಂದಿನ ಯುವ ಪೀಳಿಗೆಗೆ ಮಹಾನ್ ವ್ಯಕ್ತಿಗಳ ಇತಿಹಾಸ, ಹೋರಾಟ, ತ್ಯಾಗ, ಚಿಂತನೆಗಳ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.

ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೆ, ತಮ್ಮ ಅಗಾಧ ಪಾಂಡಿತ್ಯ ಮತ್ತು ವಿದ್ವತ್ತಿನಿಂದ ಸಂವಿಧಾನ ರಚನೆಯ ಜವಾಬ್ದಾರಿಯನ್ನು ಪಡೆದರು. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು, ಶಿಕ್ಷಣ ಮತ್ತು ಜ್ಞಾನದಿಂದ ಜೀವನ ಹಾಗೂ ಸಮಾಜ ಎರಡನ್ನು ಉತ್ತಮವಾಗಿ ರೂಪಿಸಬಹುದು ಎಂದರು.

ಶೋಷಣೆಯ ವಿರುದ್ಧ ದನಿ ಎತ್ತಲು ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ಅಂಬೇಡ್ಕರ್ ಅವರ ಸಿದ್ಧಾಂತಗಳು ಇಂದಿಗೂ ಪ್ರಸ್ತುತ. ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಹೋರಾಟ ಅನಿವಾರ್ಯ ಎಂದು ಅವರು ತಿಳಿಸಿದರು.

ಡಾ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಅಂಬೇಡ್ಕರ್ ಅವರ ಭಾಷಣಗಳ ಪುನರುಚ್ಚಾರಣೆ ಮತ್ತು ‘ಭೀಮ ಗೀತೆ’ ಹಾಡುವ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ, ಶಾಸಕರಾದ ಕೆ.ಹರೀಶ್‌ ಗೌಡ, ಡಾ.ಡಿ.ತಿಮ್ಮಯ್ಯ, ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ ಎಸ್. ಯುಕೇಶ್ ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್‌ ಆಸಿಫ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ.ಬಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್ -1 ನ ಜನಾರ್ಧನ್ ಎ. ಏನ್, ಅಪಾರ ಪೊಲೀಸ್ ಆಯುಕ್ತ ನಾಗೇಶ್, ಗಣ್ಯರಾದ ಮಲೆಯೂರು ಸೋಮಣ್ಣ, ವಿವಿಧ ಸಂಘನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

7 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago