ಮೈಸೂರು: ಕಾಂಗ್ರೆಸ್ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ವೈಯುಕ್ತಿಕ ರಾಜಕಾರಣಕ್ಕೋಸ್ಕರ ಈ ರೀತಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ರಾಜ್ಯವನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಈ ಯೋಜನೆಗಳಿಂದ ಕುಟುಂಬಗಳಲ್ಲಿ ಹೊಡಕು ಉಂಟಾಗಿದೆ. ಜೊತೆಗೆ ರಾಜ್ಯದ ಅಭಿವೃದ್ದಿ ಏನಾಗಿದೆ ಎಂಬುದರ ಕುರಿತು ಸಮೀಕ್ಷೆ ನಡೆಸಲಿ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಿಮ್ಮನ್ನ ಆರ್ಥಿಕ ತಜ್ಞರು ಅಂತ ಬೇರೆ ಕರೆಯುತ್ತಾರೆ. ಇಷ್ಟೊಂದು ಸಾಲ ಮಾಡಿ ಫ್ರೀ ಕೊಡುವ ಅವಶ್ಯಕತೆ ಇರಲಿಲ್ಲ. ಪ್ರತಿಯೊಂದು ಯೋಜನೆಗಳಿಗೂ ಮಾನದಂಡಗಳಿರುತ್ತವೆ. ಆದರೆ, 2 ಸಾವಿರ ಹಣ ಕೊಡೋದಕ್ಕೆ ಯಾವುದೇ ಮಾನದಂಡವಿಲ್ಲ. ಸಾಲ ಮಾಡಿ ಫ್ರೀ ಕೊಡ್ತೀದೀರಾ. ಉಚಿತವಾಗಿ ಕೋಡೋದನ್ನ ಬಡವರಿಗೆ ಕೊಡಿ. ಎಲ್ಲರಿಗೂ ಕೊಡ್ತೇವೆ ಎನ್ನುವುದು ದಡ್ಡತನ. 76 ಸಾವಿರ ಕೋಟಿ ಕೊಟ್ಟಿರುವುದಕ್ಕೆ ವಾಪಾಸ್ ಏನ್ ಬಂದಿದೆ ಎಂದು ಪ್ರಶ್ನಿಸಿದರು.
ದುಡಿಯುವ ಕೈಗೆ ಉದ್ಯೋಗ ನೀಡಿ:
2013ರಲ್ಲಿ ಜನಪರ ಯೋಜನೆಗಳನ್ನು ನಾನು, ರಮೇಶ್ಕುಮಾರ್ ಹಾಗೂ ಸಿಎಂ ಇಬ್ರಾಹಿಂ ತಯಾರಿಸಿದ್ದೆವು. ಆ ಯೋಜನೆಗಳಿಂದ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದರು. ಈಗ ಅವರ ಆಡಳಿತ ಸರಿಯಾಗಿಲ್ಲ. ಯುವ ಜನರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ದುಡಿಯುವ ಕೈಗೆ ಕೆಲಸ ಕೊಡಿ ಎಂದು ಕಿಡಿಕಾರಿದರು.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಬೈಯ್ಯುತ್ತಿದ್ದಾರೆ. ಈ ಪ್ರಕರಣದಲ್ಲಿ 48 ಶಾಸಕರಿದ್ದಾರೆ ಎಂದು ಕಾಂಗ್ರೆಸ್ ಸಚಿವರೇ ಹೇಳಿದ್ದಾರೆ. ಈ ಕುರಿತು ಎರಡು ಪಕ್ಷಗಳು ಧ್ವನಿ ಎತ್ತುವಲ್ಲಿ ವಿಫಲವಾಗಿವೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷ ಕಟ್ಟಿರುವುದು. ಕಟ್ಟಿರೋ ಮನೆಯಲ್ಲಿ ನೀವು ಕೂತು ಆಡಳಿತ ನಡೆಸುತ್ತಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ಗೆ ಕರೆತರದಿದ್ದರೆ ಹೇಗೆ ನೀವು ಸಿಎಂ ಅಗುತ್ತಿದ್ರಿ?
ನಾನು ಕಾಂಗ್ರೆಸ್ಗೆ ಕರೆದುಕೊಂಡು ಬರದಿದ್ದರೆ ನೀವು ಸಿಎಂ ಅಗುತ್ತಿದ್ರಾ? ನಾವು ನಡೆಸಿದ ಇಲಾಖೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನೀವು ಏನ್ ಮಾಡಿದ್ದೀರಾ ಹೇಳಿ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು. ರಾಜ್ಯದ ಖಜಾನೆ ಖಾಲಿ ಮಾಡುವುದೇ ನಿಮ್ಮ ಗುರಿ ಎಂದು ಕಿಡಿಕಾರಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…