ಮೈಸೂರು ನಗರ

ರಾಜ್ಯದಲ್ಲಿ ಅರಾಜಕತೆ ಸೃಷ್ಠಿ: ಹೆಚ್‌.ವಿಶ್ವನಾಥ್‌

ಮೈಸೂರು: ಕಾಂಗ್ರೆಸ್‌ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ವಾಗ್ದಾಳಿ ನಡೆಸಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 16 ಬಜೆಟ್‌ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ ವೈಯುಕ್ತಿಕ ರಾಜಕಾರಣಕ್ಕೋಸ್ಕರ ಈ ರೀತಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ರಾಜ್ಯವನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಈ ಯೋಜನೆಗಳಿಂದ ಕುಟುಂಬಗಳಲ್ಲಿ ಹೊಡಕು ಉಂಟಾಗಿದೆ. ಜೊತೆಗೆ ರಾಜ್ಯದ ಅಭಿವೃದ್ದಿ ಏನಾಗಿದೆ ಎಂಬುದರ ಕುರಿತು ಸಮೀಕ್ಷೆ ನಡೆಸಲಿ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಿಮ್ಮನ್ನ ಆರ್ಥಿಕ ತಜ್ಞರು ಅಂತ ಬೇರೆ ಕರೆಯುತ್ತಾರೆ. ಇಷ್ಟೊಂದು ಸಾಲ ಮಾಡಿ ಫ್ರೀ ಕೊಡುವ ಅವಶ್ಯಕತೆ ಇರಲಿಲ್ಲ. ಪ್ರತಿಯೊಂದು ಯೋಜನೆಗಳಿಗೂ ಮಾನದಂಡಗಳಿರುತ್ತವೆ. ಆದರೆ, 2 ಸಾವಿರ ಹಣ ಕೊಡೋದಕ್ಕೆ ಯಾವುದೇ ಮಾನದಂಡವಿಲ್ಲ. ಸಾಲ ಮಾಡಿ ಫ್ರೀ ಕೊಡ್ತೀದೀರಾ. ಉಚಿತವಾಗಿ ಕೋಡೋದನ್ನ ಬಡವರಿಗೆ ಕೊಡಿ. ಎಲ್ಲರಿಗೂ ಕೊಡ್ತೇವೆ ಎನ್ನುವುದು ದಡ್ಡತನ. 76 ಸಾವಿರ ಕೋಟಿ ಕೊಟ್ಟಿರುವುದಕ್ಕೆ ವಾಪಾಸ್‌ ಏನ್‌ ಬಂದಿದೆ ಎಂದು ಪ್ರಶ್ನಿಸಿದರು.

ದುಡಿಯುವ ಕೈಗೆ ಉದ್ಯೋಗ ನೀಡಿ:

2013ರಲ್ಲಿ ಜನಪರ ಯೋಜನೆಗಳನ್ನು ನಾನು, ರಮೇಶ್‌ಕುಮಾರ್‌ ಹಾಗೂ ಸಿಎಂ ಇಬ್ರಾಹಿಂ ತಯಾರಿಸಿದ್ದೆವು. ಆ ಯೋಜನೆಗಳಿಂದ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡಿದ್ದರು. ಈಗ ಅವರ ಆಡಳಿತ ಸರಿಯಾಗಿಲ್ಲ. ಯುವ ಜನರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ದುಡಿಯುವ ಕೈಗೆ ಕೆಲಸ ಕೊಡಿ ಎಂದು ಕಿಡಿಕಾರಿದರು.

ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಬೈಯ್ಯುತ್ತಿದ್ದಾರೆ. ಈ ಪ್ರಕರಣದಲ್ಲಿ 48 ಶಾಸಕರಿದ್ದಾರೆ ಎಂದು ಕಾಂಗ್ರೆಸ್‌ ಸಚಿವರೇ ಹೇಳಿದ್ದಾರೆ. ಈ ಕುರಿತು ಎರಡು ಪಕ್ಷಗಳು ಧ್ವನಿ ಎತ್ತುವಲ್ಲಿ ವಿಫಲವಾಗಿವೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿಕೆ ಶಿವಕುಮಾರ್‌ ಕಾಂಗ್ರೆಸ್‌ ಪಕ್ಷ ಕಟ್ಟಿರುವುದು. ಕಟ್ಟಿರೋ ಮನೆಯಲ್ಲಿ ನೀವು ಕೂತು ಆಡಳಿತ ನಡೆಸುತ್ತಿದ್ದೀರಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್‌ಗೆ ಕರೆತರದಿದ್ದರೆ ಹೇಗೆ ನೀವು ಸಿಎಂ ಅಗುತ್ತಿದ್ರಿ?

ನಾನು ಕಾಂಗ್ರೆಸ್‌ಗೆ ಕರೆದುಕೊಂಡು ಬರದಿದ್ದರೆ ನೀವು ಸಿಎಂ ಅಗುತ್ತಿದ್ರಾ? ನಾವು ನಡೆಸಿದ ಇಲಾಖೆಗಳನ್ನ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನೀವು ಏನ್‌ ಮಾಡಿದ್ದೀರಾ ಹೇಳಿ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು. ರಾಜ್ಯದ ಖಜಾನೆ ಖಾಲಿ ಮಾಡುವುದೇ ನಿಮ್ಮ ಗುರಿ ಎಂದು ಕಿಡಿಕಾರಿದರು.

 

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

2 mins ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

16 mins ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

50 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

4 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

20 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

20 hours ago