ಮೈಸೂರು ನಗರ

ಮೈಕ್ರೋ ಫೈನಾನ್ಸ್‌ ಹಾವಳಿ ಮಿತಿಮೀರಿದರೆ ಕ್ರಿಮಿನಲ್‌ ಕೇಸ್‌: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ನೀಡಿರುವ ಸಾಲವನ್ನು ವಾಪಸ್‌ ಪಡೆಯಲು ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇಂದು (ಜ.29) ಜಿಲ್ಲಾ ಪಂಚಾಯತ್‌ ಅರಸು ಸಭಾಂಗಣದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಮುಖ್ಯಸ್ಥರ ಜೊತೆ ಮಾತನಾಡಿದ ಅವರು, ಸಾಲ ವಸೂಲಾತಿ ಮಾಡಲು ಆರ್‌ಬಿಐ ನಿಗದಿಪಡಿಸಿರುವ ಮಾನದಂಡಗಳನ್ನು ಪಾಲನೆ ಮಾಡಬೇಕು.

ಸಾಲ ನೀಡುವಾಗ ಯಾವುದೇ ಪೂರ್ವಪರ ನೋಡದೇ ಜನರಿಗೆ ಅನೇಕ ಮೈಕ್ರೋ ಪೈನಾನ್ಸ್‌ಗಳು ಸಾಲ ನೀಡಿವೆ. ಅವರ ಆರ್ಥಿಕ ಸ್ಥಿತಿಗತಿಗಳನ್ನು ನೋಡದೇ ಫೈನಾನ್ಸ್‌ಗಳು ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳಲು ಆರ್‌ಬಿಐ ಗೈಡ್‌ಲೈನ್‌ ಉಲ್ಲಂಘಿಸಿ ಸಾಲ ನೀಡಿರುವುದು ಗಮನಕ್ಕೆ ಬಂದಿದೆ. ಗೈಡ್‌ಲೈನ್‌ ಉಲ್ಲಂಘಿಸಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಯಾವುದಾದರೂ ಮೈಕ್ರೋ ಫೈನಾನ್ಸ್‌ ಕಂಪನಿಗಳು ಬಲವಂತವಾಗಿ ಸಾಲ ವಸೂಲಿ ಮಾಡಲು ಜನರಿಗೆ ಒತ್ತಡ ಏರಿದರೆ, ಹಿಂಸೆ ನೀಡಿದರೆ ಮೈಸೂರು ಜಿಲ್ಲಾ ನಿಂಯಂತ್ರಣಾ ಕೊಠಡಿ 1077 ಅಥವಾ 0821-2423800ಗೆ ಕರೆಮಾಡಿ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಈ ವೇಳೆ ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌ ಮಾತನಾಡಿ, ಸಾಲ ನೀಡಿದ ಕಂಪನಿಗಳು ಏಜೆಂಟ್‌ರ ಮೂಲಕ ಜನರಿಗೆ ಕಿರುಕುಳ ನೀಡುತ್ತಿದ್ದರೆ ಹಾಗೂ ಯಾವುದೇ ಕಂಪನಿಗಳು ಗರಿಷ್ಠ ಮೀತಿಯ ಸಾಲ ನೀಡಿರುವುದು ಕಂಡುಬಂದರೆ ಆ ಸಂಸ್ಥೆಯ ಮ್ಯಾನೆಜರ್‌ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರಾದ ಪ್ರಭಾಕರ್‌ ಹಾಗೂ ಮೈಕ್ರೋ ಫೈನಾನ್ಸ್‌ ಕಂಪನಿಯ ಮುಖ್ಯಸ್ಥರು ಹಾಜರಿದ್ದರು.

AddThis Website Tools
ಆಂದೋಲನ ಡೆಸ್ಕ್

Recent Posts

ಒಂದು ತಿಂಗಳು ʼಜಲ ಸಂರಕ್ಷಣಾ ಅಭಿಯಾನʼ: ಡಿಕೆ ಶಿವಕುಮಾರ್‌

ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…

20 mins ago

ಸರ್ವಜ್ಞನಗರದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…

46 mins ago

ಹೊಸ 7 ವಿವಿಗಳನ್ನು ಮುಚ್ಚುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…

1 hour ago

ವೈದ್ಯರ ನಿವೃತ್ತಿ ವಯಸ್ಸು ಏರಿಸಲು ಚಿಂತನೆ: ಸಚಿವ ಶರಣ ಪ್ರಕಾಶ ಪಾಟೀಲ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…

2 hours ago

ನಿಯಮ ಪಾಲಿಸಿದರೆ ಗಣಿಗಾರಿಕೆಗೆ ಅನುಮತಿ: ಈಶ್ವರ್‌ ಖಂಡ್ರೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…

3 hours ago

ಅಪ್ಪು ಸಿನಿಮಾ ರೀ-ರಿಲೀಸ್‌: ನೆನೆದು ಭಾವುಕರಾದ ರಾಘಣ್ಣ

ಪುನೀತ್‌ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್‌ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್‌…

3 hours ago