ಮೈಸೂರು ನಗರ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯಗೆ ಏನ್ ತಂದರು? ರಾಜ್ಯಕ್ಕೆ ಏನು ತಂದ್ರು ? ಅಂತಾ ಪ್ರತಿ ನಿತ್ಯ ಮಂಡ್ಯ ಶಾಸಕರು ಸಣ್ಣತನದಲ್ಲಿ ಪ್ರಶ್ನೆ ಮಾಡ್ತಿದ್ದಾರೆ. ಮಂಡ್ಯ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಕೇಂದ್ರ ಬಜೆಟ್‌ನಲ್ಲಿ ಉತ್ತರವಿದೆ. ಆಟೋಮೇಟಿವ್ ರಿಸರ್ಚ್ ಇಂಡಿಯಾ ಸಂಸ್ಥೆ‌ಯ ಘಟಕ ತೆರೆಯಲು 100 ಎಕರೆ ಜಾಗವನ್ನು ಮಂಡ್ಯದಲ್ಲೇ ಕೊಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆಟೋಮೊಬೈಲ್ ಇಂಡಸ್ಟ್ರಿ ಸ್ಥಾಪನೆಗೆ ಕೇಂದ್ರ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಭೂಮಿ ಕೊಡಲು ಸಿಎಂಗೆ ನಾನೇ ಪತ್ರ ಬರೆದಿದ್ದೇನೆ. ನಾನು ನಾಟಕವಾಡಲು ಪತ್ರ ಬರೆದಿಲ್ಲ. ನಾಟಕವಾಡಲು ಪ್ರಧಾನಿಗಳು ನನಗೆ ಈ ಸ್ಥಾನ ಕೊಟ್ಟಿಲ್ಲ. ರಾಜ್ಯದ ಕೈಗಾರಿಕಾ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇನೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಯಾವ ಅನ್ಯಾಯವೂ ಆಗಿಲ್ಲ ಎಂದು ಕಾಂಗ್ರೆಸ್‌ ನಾಯಕರ ಆರೋಪವನ್ನು ತಳ್ಳಿಹಾಕಿದರು.

ಇನ್ನು ಕೇಂದ್ರ ಸರ್ಕಾರ ಕೊಟ್ಟ ದುಡ್ಡನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ. 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಿದ್ದದ್ದು 50 ಸಾವಿರ ಕೋಟಿ ರೂ. ಈಗ ಅದನ್ನು 63 ಸಾವಿರ ಕೋಟಿ ರೂ ಗೆ ಏರಿಸಲಾಗಿದೆ. ವಿಶ್ವೇಶ್ವರಯ್ಯ ಸ್ಟಿಲ್ ಫ್ಯಾಕ್ಟರಿ ಪುನಶ್ಚೇತನಕ್ಕೆ 4 ರಿಂದ 5 ಸಾವಿರ ಕೋಟಿ ರೂ ಕೊಡುತ್ತಿದ್ದೇವೆ. ಎಚ್.ಎಂ.ಟಿ. ಕಂಪನಿ ಪುನರ್ ಆರಂಭಕ್ಕೆ ನಾನು ಬದ್ಧವಾಗಿದ್ದೇನೆ. ಅರಣ್ಯ ಇಲಾಖೆಯವರು ಎಚ್.ಎಂ.ಟಿ. ಕಂಪನಿ ಜಾಗ ನಮ್ಮದು ಎಂದು ತಕರಾರು ತೆಗೆದುಕೊಂಡು ಕೂತಿದ್ದಾರೆ. ನಾನು ಏನು ಮಾಡಲಿ. ರಾಜ್ಯದ ಯಾರಾದರೂ ಒಬ್ಬರು ಮಂತ್ರಿ ಬಂದು ನನ್ನ ಬಳಿ ರಾಜ್ಯಕ್ಕೆ ಇಂತಹ ಪ್ರಾಜೆಕ್ಟ್ ತರಿಸಿ ಕೊಡಿ ಎಂದು ಕೇಳಿದ್ದಿರಾ? ಮೆಟ್ರೋ ಬೆಲೆ ಏರಿಕೆಗೆ ಕೇಂದ್ರ ಹೊಣೆ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಒಳ್ಳೆ ಸಂಬಂಧ ಇಟ್ಟು ಕೊಳ್ಳಲಿ. ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ಕೆಲಸ ಬಿಡಬೇಕು. ಪ್ರಧಾನ ಮಂತ್ರಿಗಳನ್ನು ಬಾಯಿಗೆ ಬಂದಂತೆ ಬೈಯ್ಯೋದು. ಅಮೇಲೆ ಪತ್ರ ಕಳಿಸೋದು. ಈ ವರ್ತನೆಯನ್ನು ರಾಜ್ಯ ಸರಕಾರ ಬದಲಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ನನ್ನ ಜೊತೆ ರಾಜ್ಯ ಸರ್ಕಾರಕ್ಕೆ ಮಾತನಾಡಲು ego ಸಮಸ್ಯೆ ಇರಬಹುದು ಅಥವಾ ಅಸೂಯೆ ಭಾವನೆ ಇರಬಹುದು. ಜೆಡಿಎಸ್ ಮುಳುಗಿ ಹೋಯ್ತು ಎಂದ ಕೊಂಡವರಿಗೆ ಜೆಡಿಎಸ್‌ಗೆ ಇಷ್ಟು ದೊಡ್ಡ ಸ್ಥಾನ ಸಿಕ್ಕಿದೆ. ಈ ಕಾರಣಕ್ಕೆ ಅಸೂಯೆ ಇರಬಹುದು ನಮ್ಮ ಬಗ್ಗೆ. ಈ ಸಿಎಂ ಗೆ ಜಾಣ ಕಿವುಡು ಇದೆ. ಕಾಂಗ್ರೆಸ್ ರಾಜ್ಯವನ್ನು ದಿವಾಳಿ ಎಬ್ಬಿಸಲು ಅಧಿಕಾರಕ್ಕೆ ಬಂದಿದೆ. ದಾಖಲೆ ಬಜೆಟ್ ಮಂಡಿಸಿ ರಾಜ್ಯವನ್ನು ಸಿಎಂ ದಿವಾಳಿ ಮಾಡುತ್ತಾರೆ. ಇವತ್ತಿನ ರಾಜ್ಯದ ಪರಿಸ್ಥಿತಿ ಗಮನಿಸಿದರೆ ನಾನು ಇಲ್ಲೇ ಇರಬೇಕಿತ್ತು ಅನ್ನಿಸುತ್ತಿದೆ. ನಾನು ವಾಪಸ್ ಇಲ್ಲಿಗೆ ಬರುವ ಟೈಂ ಬಂದಾಗ ಬರ್ತಿನಿ. ಕುಟುಂಬ ರಾಜಕಾರಣದ ವಿಚಾರದಲ್ಲಿ ನನ್ನ ಕುಟುಂಬಕ್ಕೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಗಲಿಲ್ಲ. ಜೆಡಿಎಸ್ ನಮ್ಮ ಕುಟುಂಬದವರನ್ನು ಬಿಟ್ಟು ಬೇರೆ ಯಾರು ಬೇಕಾದರೂ ಅಧ್ಯಕ್ಷರಾಗಲಿ ಎಂದು ಹೇಳಿದ್ದೇನೆ. ಆದರೆ ಯಾರು ಸಿದ್ಧರಿಲ್ಲ. ನಾನು ಏನೂ ಮಾಡಲಿ. ಜೆಡಿಎಸ್ ಅನ್ನು ಸಿಎಂ ಟಾರ್ಗೆಟ್ ಮಾಡಿದ್ದಾರೆ. ಕುಮಾರಸ್ವಾಮಿ, ಎಚ್.ಡಿ. ದೇವೇಗೌಡರನ್ನು ಯಾವ ರೀತಿ ಮುಗಿಸಬೇಕು. ಯಾವ ರೀತಿ ಇವರ ಚಾರಿತ್ರ್ಯ ಹರಣ ಮಾಡಬೇಕು ಎಂದು ಸಿಎಂ ಬಹಳ ಪ್ರಯತ್ನ ಮಾಡುತ್ತಿದ್ದಾರೆ. ಕುಟುಂಬದ ಒಳಗೆ ನಡೆದ ಒಂದು ಪ್ರಕರಣ ವಿಚಾರದಲ್ಲಿ ಎಚ್.ಡಿ. ದೇವೇಗೌಡರನ್ನು ಮಾನಸಿಕವಾಗಿ ಕುಗ್ಗಿಸುವ ಬಹಳ ಪ್ರಯತ್ನ ಆಗಿದೆ. ದೇವೇಗೌಡರ ಗರಡಿಯಲ್ಲೆ ಬೆಳೆದ ಸಿದ್ದರಾಮಯ್ಯ ಈಗ ದೇವೇಗೌಡ ಕುಟುಂಬಕ್ಕೆ ಕೊಡುತ್ತಿರುವ ಕೊಡುಗೆ ಒಂದಾ ಎರಡಾ? ವೀರಪ್ಪನ್ ಪ್ರಕರಣದಲ್ಲಿ ಪೊಲೀಸರಿಗೆ ಬಹುಮಾನ ರೂಪದಲ್ಲಿ ಹಣ ನೀಡಲಾಗಿತ್ತು. ಅದು ಬಿಟ್ಟರೆ ಹಾಸನದ ಕೇಸ್ ವಿಚಾರದಲ್ಲೇ ಸರಕಾರ ಪೊಲೀಸರಿಗೆ 30 ಲಕ್ಷ ರೂ ಬಹುಮಾನವಾಗಿ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

4 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

4 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

4 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

7 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

7 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

7 hours ago