ಮೈಸೂರು ನಗರ

ಎಲ್ಲದಕ್ಕೂ ಆರ್‌ಎಸ್ಎಸ್‌ ಕಾರಣ: ಇದು ಕಾಂಗ್ರೆಸ್‌ ರೆಡಿಮೇಡ್ ಉತ್ತರ ಎಂದ ಎಂಎಲ್‌ಸಿ ಸಿ.ಟಿ.ರವಿ

ಮೈಸೂರು: ಕಾಂಗ್ರೆಸ್‌ನವರು ಒಂದು ರೆಡಿಮೇಡ್‌ ಉತ್ತರ ರೆಡಿಮಾಡಿಕೊಂಡಿದ್ದು, ಎಲ್ಲಾ ಗಲಭೆಗೂ ಆರ್‌ಎಸ್‌ಎಸ್‌ ಕಾರಣ ಎನ್ನುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಗಲಭೆ ಮೂಲ ಯಾವುದು ಎಂದು ಪತ್ತೆ ಹಚ್ಚುವ ಕೆಲಸ ಮಾಡಿಲ್ಲ. ಸುಹಾಸ್ ಶೆಟ್ಟಿ, ಶರತ್ ಮಡಿವಾಳ, ಪ್ರವೀಣ್ ನೆಟ್ಟಾರು ಹತ್ಯೆಗೆ ಆರ್‌ಎಸ್‌ಎಸ್‌ ಕಾರಣನಾ ಎಂದು ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್ ನಾಯಕರು ಒಂದು ರೆಡಿಮೇಡ್ ಉತ್ತರ ರೆಡಿ ಇಟ್ಟುಕೊಂಡಿದ್ದಾರೆ. ಎಲ್ಲಾ ಘಟನೆಗೂ ಆರ್‌ಎಸ್‌ಎಸ್‌ ಕಾರಣ ಎಂದು ಹೇಳುತ್ತಿದ್ದಾರೆ. ಅವರೆಲ್ಲರೂ ಇದನ್ನು ದಕ್ಷಿಣದ ಕಾಶ್ಮೀರದ ರೀತಿ ನೋಡುತ್ತಿದ್ದಾರೆ. ಅದಕ್ಕಾಗಿ ಇಲ್ಲಿ ಹಿಂದೂಗಳನ್ನು ಅದೇ ರೀತಿ ನೋಡುತ್ತಿದ್ದಾರೆ. ಇವರನ್ನು ತಡೆಯೋದು ಆರ್.ಎಸ್.ಎಸ್ ಹಾಗೂ ವಿಹೆಚ್‌ಪಿ. ಹಾಗಾಗಿ ಎಲ್ಲದಕ್ಕೂ ಆರ್.ಎಸ್.ಎಸ್ ಕಾರಣ ಅಂತಾರೆ. ಬಿನ್ ಲಾಡೆನ್ ಹುಟ್ಟು ಹಾಕಿದ್ದು ಯಾರು? ಎಂದು ಪ್ರಶ್ನಿಸಿದ ಅವರು, ಸತ್ಯ ಗೊತ್ತಿದ್ರೂ ವೋಟ್ ಬ್ಯಾಂಕ್ ಆಸೆಯಿಂದ ಈ ರೀತಿ ಮಾಡುತ್ತಿದ್ದಾರೆ. ವಸ್ತು ನಿಷ್ಠೆಯಿಂದ ನೋಡಿದ್ರೆ ಸತ್ಯ ಗೊತ್ತಾಗುತ್ತೆ ಎಂದು ಕಾಂಗ್ರೆಸ್‌ ನಾಯಕರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ:- ದೇಶದಲ್ಲಿ ಕಾಂಗ್ರೆಸ್‌ ಇಲ್ಲ ಅಂದ್ರೂ ಆಕಾಶ ಕಳಚಿ ಬೀಳಲ್ಲ: ಸತೀಶ್‌ ಜಾರಕಿಹೊಳಿಗೆ ಸಿ.ಟಿ.ರವಿ ಟಾಂಗ್‌

ಇನ್ನು ಹೇಮಾವತಿ ನೀರಿಗಾಗಿ ತುಮಕೂರಿನಲ್ಲಿ ಹೋರಾಟ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನೀರಾವರಿ ವಿಚಾರದಲ್ಲಿ ಹೋರಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಮೊಕದ್ದಮೆ ಹಾಕಿರೋದು ತಪ್ಪು. ಈ ಮೂಲಕ ರಾಜ್ಯ ಸರ್ಕಾರ ಬೆದರಿಸುವ ತಂತ್ರ ಮಾಡುತ್ತಿದೆ. ಇದು ಸರಿಯಾದ ನಿರ್ಧಾರವಲ್ಲ ಈ ಕೂಡಲೇ ಮೊಕದ್ದಮೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

6 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

17 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

17 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

17 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

17 hours ago