ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ.
ಇನ್ನೂ ಬಲೂನ್ ಮಾರುತ್ತಿದ್ದ ಮೃತ ವ್ಯಕ್ತಿ ಉತ್ತರ ಪ್ರದೇಶದಿಂದ ಬಲೂನ್ ಮಾರಲು ನಾಲ್ವರು ಮೈಸೂರಿಗೆ ಬಂದಿದ್ದಾರೆ. ಸ್ಫೋಟದ ಬಳಿಕ ಸಲೀಂ ಜೊತೆಗೆ ಬಂದಿದ್ದ ಉಳಿದವರು ನಾಪತ್ತೆಯಾಗಿದ್ದು, ಇತರರ ನಡೆ ಅನುಮಾನ ಹೆಚ್ಚಿಸಿದೆ. ಷರೀಫ್ ಲಾಡ್ಜ್ ಶೋಧಕ್ಕೆ ಇಳಿದ ಪೊಲೀಸರಿಗೆ ಒಂದು ಸೈಕಲ್ನಲ್ಲಿ ಶಾಲು ಸಿಂಗ್ ಎಂಬ ಹೆಸರಿನ ಕ್ಯೂ ಆರ್ ಕೋಡ್ ಪತ್ತೆಯಾಗಿದೆ. ಈ ವೇಳೆ ದೊರೆತ ಮೊಬೈಲ್ನಲ್ಲಿ ಆತ ಅರಮನೆಯ ಒಳಗೆ ಪ್ರೇಕ್ಷಕನಂತೆ ಹೋಗಿ ಕೆಲ ಫೋಟೊಗಳನ್ನು ತೆಗೆದು ತನ್ನ ಡಿಪಿಯಲ್ಲಿ ಅಳವಡಿಸಿಕೊಂಡಿರುವುದು ಕಂಡುಬಂದಿದೆ.
ಬಲೂನ್ ಮಾರಾಟ ಮಾಡಲು ಬಂದಿರುವ ಅನೇಕ ಬಲೂನ್ ಮಾರಾಟಗಾರರು ಇದೇ ಲಾಡ್ಜ್ ನಲ್ಲಿ ತಂಗುತ್ತಿದ್ದರು ಎನ್ನಲಾಗ್ತಿದೆ. ಮೃತ ಸಲೀಂ ಕೂಡ ಷರೀಫ್ ಲಾಡ್ಜ್ ನಲ್ಲಿ ತಂಗಿದ್ದ. ಸದ್ಯ ಲಾಡ್ಜ್ ಮುಂಭಾಗ ಇನ್ನೂ 3 ಸೈಕಲ್ ನಿಂತಿವೆ. ಬಲೂನ್ ಮಾರಾಟ ಮಾಡಲು ಬಳಸುತ್ತಿದ್ದ ಸೈಕಲ್ ಹಾಗೂ ಲಾಡ್ಜ್ ನಾ ಸಿಸಿಟಿವಿ ಫೂಟೇಜ್ ಗಳನ್ನ ಪೊಲೀಸರು ಕಲೆ ಹಾಕಿದ್ದಾರೆ.
ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…