ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ವಿಧಾನಸಭೆಯಲ್ಲಿ ನಡೆಯಬೇಕು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅದರ ಮಹತ್ವವನ್ನು ಆಳು ಮಾಡಿದೆ. ರಾಜ್ಯದಲ್ಲೂ ಎಗ್ಗಿಲ್ಲದೇ ಲೂಟಿಗಳು ನಡೆಯುತ್ತಿವೆ. ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕುಯ್ಯುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಲು ಸದನದಲ್ಲಿ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬೀಸುವ ಗಾಳಿಯನ್ನು ಬಿಟ್ಟು ಎಲ್ಲದರ ಮೇಲೆ ಟ್ಯಾಕ್ಸ್ ಹಾಕುವ ಕೆಲಸ ಮಾಡಿದೆ. ಇದಕ್ಕಾಗಿ ಬಿಜೆಪಿ ವತಿಯಿಂದ ಜನರ ಬಳಿ ತೆರಳಿ ನೀಚ ಸರ್ಕಾರದ ಬಗ್ಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಇದು ಜನರಿಗಾಗಿ ನಡೆಯುವ ಹೋರಾಟವಾಗಿದೆ. ಹೀಗಾಗಿ ನಮ್ಮ ಪಕ್ಷದ ಕಾರ್ಯಕರ್ತರು ಕೈ ಜೋಡಿಸಿ, ಮನೆ ಮನೆಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…