ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜಿ.ಪರಮೇಶ್ವರ್‌ ಅಭಿಮಾನಿಗಳು, ದಲಿತ ಸಮುದಾಯ ಯಾವಾಗಲೂ ಕಾಂಗ್ರೆಸ್ ಪರವಾಗಿದೆ. ಅನೇಕ ಸಂದರ್ಭದಲ್ಲಿ ದಲಿತರಿಗೆ ಸಿಎಂ ಸ್ಥಾನ ಕೈತಪ್ಪಿದೆ. ಪರಮೇಶ್ವರ್‌ರಿಗೆ 2013ರಲ್ಲಿ ಸಿಎಂ ಆಗೋ ಅವಕಾಶ ಇತ್ತು. ಆ ವೇಳೆ ಅವರನ್ನು ಹೇಗೆ ಸೋಲಿಸಿದ್ರು ಅನ್ನೋದು ಗೊತ್ತಿದೆ. ನಾವಿಲ್ಲಿ ಯಾವುದೇ ಸಮಾಜದ ವಿರುದ್ಧ ಮಾತನಾಡಲ್ಲ. ಪ್ರತಿ ಬಾರಿಯೂ ಕಾಂಗ್ರೆಸ್ ಪಕ್ಷವನ್ನ ದಲಿತ ಸಮುದಾಯ ಬೆಂಬಲಿಸುತ್ತಾ ಬಂದಿದೆ. ದಲಿತರಿಗೆ ಅನ್ಯಾಯವಾಯ್ತು ಯಾರು ಪಾರ್ಟಿ ಬಿಟ್ಟು ಹೋಗಿಲ್ಲ. ನಾವು ವೋಟ್ ಹಾಕಿರೋದಿಕ್ಕೆ ಕಾಂಗ್ರೆಸ್ ಗೆದ್ದಿರೋದು.

ಮೈಸೂರಿನಲ್ಲಿ ದಲಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಹಿಂದ ಸಮಾವೇಶ ಮಾಡಬೇಕು. ಅಹಿಂದ ಅಂತ ಬಂದ್ರೆ ದಲಿತ ಸಮಾಜ ಕೂಡ ಸೇರುತ್ತದೆ. ಪರಮೇಶ್ವರ್ ಸಿಎಂ ಮಾಡುವುದಾದರೆ ನಾವೂ ಅಹಿಂದಾ ಸಮಾವೇಶದಲ್ಲಿ ಭಾಗಿಯಾಗುತ್ತೇವೆ. ಪರಮೋತ್ಸವ ಮಾಡುವ ವೇಳೆ ಪರಮೇಶ್ವರ್‌ರನ್ನ ಕಾರ್ಯಕ್ರಮಕ್ಕೆ ಹೋಗಬಾರದು ಅನ್ನೋ ಅಡೆ ತಡೆ ಹಾಕಿದ್ರಿ. ಮೈಸೂರಿಗೆ ನೀವೇ ಲೀಡರ್ ಆಗ್ಬೇಕು ಅನ್ನೋದು ನಿಮ್ಮ ಭ್ರಮೆ. ಅಹಿಂದ ಅಂತ ಹೇಳಿ ಅಧಿಕಾರ ನೀವು ತಗೋಳೋದಲ್ಲ. ನಮಗೂ ಅಧಿಕಾರ ಕೊಡಿ. ಸಿದ್ದರಾಮಯ್ಯನವರೇ ನೀವು ಸಿಎಂ ಆಗಿದ್ದೀರಾ. ಈಗ ನೀವೇ ದಲಿತರಿಗೆ ಅವಕಾಶ ಮಾಡಿಕೊಡಿ. ನೀವೇ ಪರಮೇಶ್ವರ್‌ರನ್ನು ಸಿಎಂ ಮಾಡ್ತೀವಿ ಅಂತ ಘೋಷಣೆ ಮಾಡಿ. ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡ್ತಿದ್ದಾರೆ. ಪರಮೇಶ್ವರ್‌ಗೆ ಅಧಿಕಾರ ಕೊಟ್ರೆ ಹೋಗ್ತಿವಿ. ಇಲ್ಲ ಅಂದ್ರೆ ನಾವು ಹೋಗಲ್ಲ. ನಾವು ಮೈಸೂರಿನಲ್ಲಿ ದಲಿತ ಸಮಾವೇಶ ಮಾಡ್ತೀವಿ. ದಲಿತ ಸಮಾಜದ ಎಲ್ಲರಿಗೂ ಆಹ್ವಾನ ನೀಡ್ತೀವಿ ಎಂದು ಪರಮೇಶ್ವರ್ ಅಭಿಮಾನಿಗಳ ಸಂಘದ ಅಧ್ಯಕ್ಷ, ದೇವರಾಜ ಅರಸು ಅಭಿಮಾನಿಗಳ ಸಂಘದ ಅಧ್ಯಕ್ಷ ಬಿಳಿಕೆರೆ ರಾಜು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

11 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

11 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

11 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

12 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

14 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

15 hours ago