ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜಿ.ಪರಮೇಶ್ವರ್‌ ಅಭಿಮಾನಿಗಳು, ದಲಿತ ಸಮುದಾಯ ಯಾವಾಗಲೂ ಕಾಂಗ್ರೆಸ್ ಪರವಾಗಿದೆ. ಅನೇಕ ಸಂದರ್ಭದಲ್ಲಿ ದಲಿತರಿಗೆ ಸಿಎಂ ಸ್ಥಾನ ಕೈತಪ್ಪಿದೆ. ಪರಮೇಶ್ವರ್‌ರಿಗೆ 2013ರಲ್ಲಿ ಸಿಎಂ ಆಗೋ ಅವಕಾಶ ಇತ್ತು. ಆ ವೇಳೆ ಅವರನ್ನು ಹೇಗೆ ಸೋಲಿಸಿದ್ರು ಅನ್ನೋದು ಗೊತ್ತಿದೆ. ನಾವಿಲ್ಲಿ ಯಾವುದೇ ಸಮಾಜದ ವಿರುದ್ಧ ಮಾತನಾಡಲ್ಲ. ಪ್ರತಿ ಬಾರಿಯೂ ಕಾಂಗ್ರೆಸ್ ಪಕ್ಷವನ್ನ ದಲಿತ ಸಮುದಾಯ ಬೆಂಬಲಿಸುತ್ತಾ ಬಂದಿದೆ. ದಲಿತರಿಗೆ ಅನ್ಯಾಯವಾಯ್ತು ಯಾರು ಪಾರ್ಟಿ ಬಿಟ್ಟು ಹೋಗಿಲ್ಲ. ನಾವು ವೋಟ್ ಹಾಕಿರೋದಿಕ್ಕೆ ಕಾಂಗ್ರೆಸ್ ಗೆದ್ದಿರೋದು.

ಮೈಸೂರಿನಲ್ಲಿ ದಲಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಹಿಂದ ಸಮಾವೇಶ ಮಾಡಬೇಕು. ಅಹಿಂದ ಅಂತ ಬಂದ್ರೆ ದಲಿತ ಸಮಾಜ ಕೂಡ ಸೇರುತ್ತದೆ. ಪರಮೇಶ್ವರ್ ಸಿಎಂ ಮಾಡುವುದಾದರೆ ನಾವೂ ಅಹಿಂದಾ ಸಮಾವೇಶದಲ್ಲಿ ಭಾಗಿಯಾಗುತ್ತೇವೆ. ಪರಮೋತ್ಸವ ಮಾಡುವ ವೇಳೆ ಪರಮೇಶ್ವರ್‌ರನ್ನ ಕಾರ್ಯಕ್ರಮಕ್ಕೆ ಹೋಗಬಾರದು ಅನ್ನೋ ಅಡೆ ತಡೆ ಹಾಕಿದ್ರಿ. ಮೈಸೂರಿಗೆ ನೀವೇ ಲೀಡರ್ ಆಗ್ಬೇಕು ಅನ್ನೋದು ನಿಮ್ಮ ಭ್ರಮೆ. ಅಹಿಂದ ಅಂತ ಹೇಳಿ ಅಧಿಕಾರ ನೀವು ತಗೋಳೋದಲ್ಲ. ನಮಗೂ ಅಧಿಕಾರ ಕೊಡಿ. ಸಿದ್ದರಾಮಯ್ಯನವರೇ ನೀವು ಸಿಎಂ ಆಗಿದ್ದೀರಾ. ಈಗ ನೀವೇ ದಲಿತರಿಗೆ ಅವಕಾಶ ಮಾಡಿಕೊಡಿ. ನೀವೇ ಪರಮೇಶ್ವರ್‌ರನ್ನು ಸಿಎಂ ಮಾಡ್ತೀವಿ ಅಂತ ಘೋಷಣೆ ಮಾಡಿ. ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡ್ತಿದ್ದಾರೆ. ಪರಮೇಶ್ವರ್‌ಗೆ ಅಧಿಕಾರ ಕೊಟ್ರೆ ಹೋಗ್ತಿವಿ. ಇಲ್ಲ ಅಂದ್ರೆ ನಾವು ಹೋಗಲ್ಲ. ನಾವು ಮೈಸೂರಿನಲ್ಲಿ ದಲಿತ ಸಮಾವೇಶ ಮಾಡ್ತೀವಿ. ದಲಿತ ಸಮಾಜದ ಎಲ್ಲರಿಗೂ ಆಹ್ವಾನ ನೀಡ್ತೀವಿ ಎಂದು ಪರಮೇಶ್ವರ್ ಅಭಿಮಾನಿಗಳ ಸಂಘದ ಅಧ್ಯಕ್ಷ, ದೇವರಾಜ ಅರಸು ಅಭಿಮಾನಿಗಳ ಸಂಘದ ಅಧ್ಯಕ್ಷ ಬಿಳಿಕೆರೆ ರಾಜು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago