ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ತವರಲ್ಲಿ ದಲಿತ ಸಿಎಂ ಕೂಗು

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜಿ.ಪರಮೇಶ್ವರ್‌ ಅಭಿಮಾನಿಗಳು, ದಲಿತ ಸಮುದಾಯ ಯಾವಾಗಲೂ ಕಾಂಗ್ರೆಸ್ ಪರವಾಗಿದೆ. ಅನೇಕ ಸಂದರ್ಭದಲ್ಲಿ ದಲಿತರಿಗೆ ಸಿಎಂ ಸ್ಥಾನ ಕೈತಪ್ಪಿದೆ. ಪರಮೇಶ್ವರ್‌ರಿಗೆ 2013ರಲ್ಲಿ ಸಿಎಂ ಆಗೋ ಅವಕಾಶ ಇತ್ತು. ಆ ವೇಳೆ ಅವರನ್ನು ಹೇಗೆ ಸೋಲಿಸಿದ್ರು ಅನ್ನೋದು ಗೊತ್ತಿದೆ. ನಾವಿಲ್ಲಿ ಯಾವುದೇ ಸಮಾಜದ ವಿರುದ್ಧ ಮಾತನಾಡಲ್ಲ. ಪ್ರತಿ ಬಾರಿಯೂ ಕಾಂಗ್ರೆಸ್ ಪಕ್ಷವನ್ನ ದಲಿತ ಸಮುದಾಯ ಬೆಂಬಲಿಸುತ್ತಾ ಬಂದಿದೆ. ದಲಿತರಿಗೆ ಅನ್ಯಾಯವಾಯ್ತು ಯಾರು ಪಾರ್ಟಿ ಬಿಟ್ಟು ಹೋಗಿಲ್ಲ. ನಾವು ವೋಟ್ ಹಾಕಿರೋದಿಕ್ಕೆ ಕಾಂಗ್ರೆಸ್ ಗೆದ್ದಿರೋದು.

ಮೈಸೂರಿನಲ್ಲಿ ದಲಿತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಹಿಂದ ಸಮಾವೇಶ ಮಾಡಬೇಕು. ಅಹಿಂದ ಅಂತ ಬಂದ್ರೆ ದಲಿತ ಸಮಾಜ ಕೂಡ ಸೇರುತ್ತದೆ. ಪರಮೇಶ್ವರ್ ಸಿಎಂ ಮಾಡುವುದಾದರೆ ನಾವೂ ಅಹಿಂದಾ ಸಮಾವೇಶದಲ್ಲಿ ಭಾಗಿಯಾಗುತ್ತೇವೆ. ಪರಮೋತ್ಸವ ಮಾಡುವ ವೇಳೆ ಪರಮೇಶ್ವರ್‌ರನ್ನ ಕಾರ್ಯಕ್ರಮಕ್ಕೆ ಹೋಗಬಾರದು ಅನ್ನೋ ಅಡೆ ತಡೆ ಹಾಕಿದ್ರಿ. ಮೈಸೂರಿಗೆ ನೀವೇ ಲೀಡರ್ ಆಗ್ಬೇಕು ಅನ್ನೋದು ನಿಮ್ಮ ಭ್ರಮೆ. ಅಹಿಂದ ಅಂತ ಹೇಳಿ ಅಧಿಕಾರ ನೀವು ತಗೋಳೋದಲ್ಲ. ನಮಗೂ ಅಧಿಕಾರ ಕೊಡಿ. ಸಿದ್ದರಾಮಯ್ಯನವರೇ ನೀವು ಸಿಎಂ ಆಗಿದ್ದೀರಾ. ಈಗ ನೀವೇ ದಲಿತರಿಗೆ ಅವಕಾಶ ಮಾಡಿಕೊಡಿ. ನೀವೇ ಪರಮೇಶ್ವರ್‌ರನ್ನು ಸಿಎಂ ಮಾಡ್ತೀವಿ ಅಂತ ಘೋಷಣೆ ಮಾಡಿ. ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡ್ತಿದ್ದಾರೆ. ಪರಮೇಶ್ವರ್‌ಗೆ ಅಧಿಕಾರ ಕೊಟ್ರೆ ಹೋಗ್ತಿವಿ. ಇಲ್ಲ ಅಂದ್ರೆ ನಾವು ಹೋಗಲ್ಲ. ನಾವು ಮೈಸೂರಿನಲ್ಲಿ ದಲಿತ ಸಮಾವೇಶ ಮಾಡ್ತೀವಿ. ದಲಿತ ಸಮಾಜದ ಎಲ್ಲರಿಗೂ ಆಹ್ವಾನ ನೀಡ್ತೀವಿ ಎಂದು ಪರಮೇಶ್ವರ್ ಅಭಿಮಾನಿಗಳ ಸಂಘದ ಅಧ್ಯಕ್ಷ, ದೇವರಾಜ ಅರಸು ಅಭಿಮಾನಿಗಳ ಸಂಘದ ಅಧ್ಯಕ್ಷ ಬಿಳಿಕೆರೆ ರಾಜು ಹೇಳಿದರು.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago